
ಪ್ರಜಾವಾಣಿ ವಾರ್ತೆ
ಕಲಬುರಗಿ: ‘ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಯದ 9ನೇ ಘಟಿಕೋತ್ಸವ ನವೆಂಬರ್ 8ರಂದು ನಡೆಯಲಿದ್ದು, ಭಾರತೀಯ ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ದಿನೇಶ ಮಹೇಶ್ವರಿ ಅವರು ಘಟಿಕೋತ್ಸವ ಭಾಷಣ ಮಾಡುವರು’ ಎಂದು ಕುಲಪತಿ ಬಟ್ಟು ಸತ್ಯನಾರಾಯಣ ತಿಳಿಸಿದರು.
‘2024–25ನೇ ಸಾಲಿನಲ್ಲಿ 756 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹತೆ ಗಳಿಸಿದ್ದಾರೆ. ಅದರಲ್ಲಿ ಅತ್ಯುತ್ತಮ ಸಾಧನೆ ತೋರಿದ 27 ಮಂದಿಗೆ 28 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುವುದು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಕರ್ನಾಟಕ ಕೇಂದ್ರೀಯ ವಿವಿಯಲ್ಲಿ 2026–27ನೇ ಶೈಕ್ಷಣಿಕ ವರ್ಷದಲ್ಲಿ ಏಳು ಹೊಸ ಕೋರ್ಸ್ಗಳನ್ನು ಆರಂಭಿಸುತ್ತಿದೆ. ಇನ್ನೂ ಏಳು ಕೋರ್ಸ್ಗಳಿಗೆ ಅನುಮತಿ ಕೋರಿ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.