ADVERTISEMENT

ಕಲಬುರ್ಗಿ: ಪತ್ರಿಕಾ ವಿತರಕರಿಗೆ ಕಿಟ್‌ ವಿತರಣೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2021, 3:59 IST
Last Updated 13 ಜೂನ್ 2021, 3:59 IST
ಕಲಬುರ್ಗಿಯಲ್ಲಿ ಶುಕ್ರವಾರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ರಾಜಕುಮಾರ ಪಾಟೀಲ ತೆಲ್ಕೂರ ಅವರು ಪತ್ರಿಕಾ ವಿತರಕರಿಗೆ ಆಹಾರ ಧಾನ್ಯದ ಕಿಟ್‌ಗಳನ್ನು ವಿತರಿಸಿದರು
ಕಲಬುರ್ಗಿಯಲ್ಲಿ ಶುಕ್ರವಾರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ರಾಜಕುಮಾರ ಪಾಟೀಲ ತೆಲ್ಕೂರ ಅವರು ಪತ್ರಿಕಾ ವಿತರಕರಿಗೆ ಆಹಾರ ಧಾನ್ಯದ ಕಿಟ್‌ಗಳನ್ನು ವಿತರಿಸಿದರು   

ಕಲಬುರ್ಗಿ: ಇಲ್ಲಿನ ಡಿಸಿಸಿ ಬ್ಯಾಂಕ್‌ ವತಿಯಿಂದ ನಗರದ ಪತ್ರಿಕಾ ವಿತರಕರಿಗೆ ಶುಕ್ರವಾರ ಆಹಾರ ಧಾನ್ಯದ ಕಿಟ್‌ಗಳನ್ನು ವಿತರಿಸಲಾಯಿತು.

ಬ್ಯಾಂಕಿನ ಅಧ್ಯಕ್ಷರೂ ಆದ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಕಿಟ್‌ಗಳನ್ನು ವಿತರಿಸಿದರು. ‘ಕೊರೊನಾದಿಂದ ಕಷ್ಟದಲ್ಲಿರುವವರಿಗೆ ಪ್ರತಿಯೊಬ್ಬರೂ ಸ್ಪಂದಿಸಬೇಕಿದೆ. ಪತ್ರಿಕೆ ವಿತರಣೆ ಮಾಡುವವರು ಪ್ರತಿ ದಿನ ನಗರದಲ್ಲಿ ಸುತ್ತಬೇಕಾಗುತ್ತದೆ. ಅವರ ಜೀವನವೂ ಸಂಕಷ್ಟದಲ್ಲಿದೆ. ಹಾಗಾಗಿ, ಬ್ಯಾಂಕಿನಿಂದ ಕಿಟ್‌ ವಿತರಿಸಲಾಗುತ್ತಿದೆ’ ಎಂದರು.

ಬ್ಯಾಂಕಿನ ಉಪಾಧ್ಯಕ್ಷ ಸುರೇಶ ಸಜ್ಜನ್‌, ನಿರ್ದೆಶಕರಾದ ಶರಣ ಬಸಪ್ಪ ಪಾಟೀಲ ಅಷ್ಟಗಾ, ಅಶೋಕ ಸಾವಳೇಶ್ವರ, ಬಾಪುಗೌಡ ಪಾಟೀಲ, ಬಸವರಾಜ ಪಾಟೀಲ, ನಿಂಗಣ್ಣ ದೊಡ್ಮನಿ, ಸಿದ್ರಾಮರಡ್ಡಿ ಕೌಳೂರ, ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ನಿಂಬಾಳ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.