ADVERTISEMENT

ಒಂದು ವಾರದಲ್ಲಿ ನೆರೆ ರಾಜ್ಯಗಳಿಗೆ ಬಸ್ ಸಂಚಾರ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2020, 13:51 IST
Last Updated 7 ಸೆಪ್ಟೆಂಬರ್ 2020, 13:51 IST
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ   

ಕಲಬುರ್ಗಿ: ಆಂಧ್ರಪ್ರದೇಶಕ್ಕೆ ಶೀಘ್ರವೇ ಬಸ್ ಸಂಚಾರ ಶುರುವಾಗಲಿದ್ದು, ಮುಂದಿನ ಒಂದು ವಾರದಲ್ಲಿ ತಮಿಳುನಾಡು, ಕೇರಳ, ತೆಲಂಗಾಣ ಹಾಗೂ ಗೋವಾ ರಾಜ್ಯಗಳಿಗೆ ಸಾರಿಗೆ ಸಂಸ್ಥೆಯ ಬಸ್‌ ಸಂಚಾರ ಆರಂಭಿಸಲಾಗುವುದು ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರಕಟಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹೊರತುಪಡಿಸಿ ಎಲ್ಲ ನೆರೆಯ ರಾಜ್ಯಗಳಿಗೆ ಪತ್ರ ಬರೆಯಲಾಗಿದೆ. ಈಗ ನೆರೆಯ ಆಂಧ್ರಪ್ರದೇಶ ಒಪ್ಪಿಗೆ ನೀಡಿದೆ. ಹೀಗಾಗಿ ಎರಡು–ಮೂರು ದಿನದೊಳಗೆ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ನೆರೆಯ ರಾಜ್ಯಗಳಾದ ತಮಿಳುನಾಡು, ಪುದುಚೇರಿ, ಕೇರಳ,‌ ತೆಲಂಗಾಣ ಸಾರಿಗೆ ಸಚಿವರಿಗೆ ಪತ್ರ ಬರೆಯಲಾಗಿದೆ. ಈಗ ಆಂ‌ಧ್ರಪ್ರದೇಶ ತನ್ನ ಒಪ್ಪಿಗೆ ನೀಡಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಬಸ್ ಸಂಚಾರ ಶುರು ಮಾಡಲಾಗುವುದು ಎಂದು ವಿವರಿಸಿದರು.

ADVERTISEMENT

ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ನಿತ್ಯ ಒಂದು ಕೋಟಿ ಜನ ಸಂಚರಿಸುತ್ತಿದ್ದರು. ಆದರೆ ಅದರಲ್ಲಿ ಕೇವಲ ಶೇ 35ರಿಂದ 40ರಷ್ಟು ಮಾತ್ರ ಜನ ಪ್ರಯಾಣಿಸುತ್ತಿದ್ದಾರೆ. ಕೊರೊನಾದಿಂದ ಹೆಚ್ಚಿಗೆ ನಷ್ಟ ಸಂಭವಿಸಿರುವ ಸರ್ಕಾರಿ ಸಂಸ್ಥೆಗಳ ಪೈಕಿ ಸಾರಿಗೆ ಸಂಸ್ಥೆ ಮುಂಚೂಣಿಯಲ್ಲಿದೆ. ನಾಲ್ಕೂ ನಿಗಮಗಳಿಂದ ₹ 2760 ಕೋಟಿ ನಷ್ಟವಾಗಿದೆ. ದಿನಾಲು ₹ 1.5 ಕೋಟಿ ನಷ್ಟವಾಗಿದೆ. ಈಗ ಸೋರಿಕೆ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸವದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.