ADVERTISEMENT

ನಂಜುಂಡಿಗೆ ಸಚಿವ ಸ್ಥಾನ ನೀಡಿ: ಕಾಳಹಸ್ತೇಂದ್ರ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 18 ಜನವರಿ 2020, 20:07 IST
Last Updated 18 ಜನವರಿ 2020, 20:07 IST

ಕಲಬುರ್ಗಿ: ‘ವಿಶ್ವಕರ್ಮ ಸಮಾಜದ ನಾಯಕ ಕೆ.ಪಿ. ನಂಜುಂಡಿ ಅವರಿಗೆ ಮಂತ್ರಿ ಆಗುವ ಯೋಗ ಮತ್ತು ಯೋಗ್ಯತೆ ಎರಡೂ ಇವೆ. ಸಮಾಜದ 67 ಸ್ವಾಮೀಜಿಗಳು ಬೆನ್ನಿಗೆ ಇದ್ದೇವೆ. ನ್ಯಾಯಬದ್ಧವಾಗಿ ಸಿಗಬೇಕಾದ ಸ್ಥಾನವನ್ನು ಕೇಳಿ ಪಡೆಯುತ್ತೇವೆ’ ಎಂದು ವಿಶ್ವಕರ್ಮ ಮಠಾಧೀಶರ ಒಕ್ಕೂಟದ ಅಧ್ಯಕ್ಷ­ ಕಾಳಹಸ್ತೇಂದ್ರ ಸ್ವಾಮೀಜಿ ಹೇಳಿದರು.

ನಗರದಲ್ಲಿ ಶನಿವಾರ ಆಯೋಜಿಸಿದ್ದ ಅಮರಶಿಲ್ಪಿಜಕಣಾಚಾರಿ ಸಂಸ್ಮರಣೋತ್ಸವ ಹಾಗೂ ಕಲ್ಯಾಣ ಕರ್ನಾಟಕ ವಿಶ್ವಕರ್ಮ ಮಹಾಸಭಾ ಸಮಾವೇಶದಲ್ಲಿ ಅವರು ಮಾತನಾಡಿದರು.

‘ವಿಶ್ವಕರ್ಮರು ರಾಜಕೀಯ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಯಾರು ನಮ್ಮನ್ನು ನಿರ್ಲಕ್ಷಿಸುತ್ತಾರೆ ಅವರಿಗೆ ಪಾಠ ಕಲಿಸಬೇಕು’ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.