ADVERTISEMENT

ಕರ್ತವ್ಯಲೋಪ ಆರೋಪ: ಪ್ರೌಢಶಾಲೆ ಮುಖ್ಯ ಶಿಕ್ಷಕ‌ ಅಮಾನತು

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2023, 13:29 IST
Last Updated 24 ನವೆಂಬರ್ 2023, 13:29 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಶಾದಿಪುರ ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಸಾಯಬಣ್ಣ ಅವರನ್ನು ಕರ್ತವ್ಯಲೋಪ ಆರೋಪದ ಮೇರೆಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ (ಆಡಳಿತ) ಸಕ್ರೆಪ್ಪಗೌಡ ಜಿ‌.ಬಿರಾದಾರ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ.

ಮುಖ್ಯ ಶಿಕ್ಷಕ ಮೇಲಧಿಕಾರಿಗಳ ಅನುಮತಿ ಪಡೆಯದೇ ರಜೆಯ ಮೇಲೆ ಹೋಗಿರುವುದು ಮತ್ತು ಮಧ್ಯಾಹ್ನದ ಬಿಸಿ ಊಟ ಸಮರ್ಪಕವಾಗಿ ವಿತರಿಸದಿರುವುದು, ಬಿಸಿ ಊಟದ ಆಹಾರ ಸಾಮಗ್ರಿ ಖರ್ಚು ಹಾಗೂ ಹಣಕಾಸಿನ ಖರ್ಚಿನ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸದೇ ಕರ್ತವ್ಯಲೋಪದ ಕಾರಣ ಅಮಾನತು‌ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ‌ ಭಂವರ್ ಸಿಂಗ್ ಮೀನಾ ಅವರು ನ 17ರಂದು ಶಾಲೆಗೆ ಹಠಾತ್ ಭೇಟಿ ನೀಡಿದ್ದರು. ಅಲ್ಲಿನ ಬಿಸಿ ಊಟ ನಿರ್ವಹಣೆಯ ಅಸಮರ್ಪಕತೆ ಕಂಡು ವರದಿ‌ ನೀಡುವಂತೆ ತಾ.ಪಂ. ಇಒ ಶಂಕರ ರಾಠೋಡ ಅವರಿಗೆ ಸೂಚಿಸಿದ್ದರು. ಇಒ ಅವರ ವರದಿ ಹಾಗೂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು ಮತ್ತು ತಾ.ಪಂ. ಯೋಜನಾಧಿಕಾರಿಗಳು ಜಂಟಿ ಪರಿಶೀಲನಾ ವರದಿ ನೀಡಿದ್ದರು. ಅದರಂತೆ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿ.ಪಂ. ಸಿಇಒ ಆದೇಶದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.