ADVERTISEMENT

‘ಧಮ್ಮಚಕ್ರ ಪ್ರವರ್ತನ’ ರದ್ದು

ಧಮ್ಮಚಕ್ರ ಪ್ರವರ್ತನ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 15:38 IST
Last Updated 19 ಅಕ್ಟೋಬರ್ 2020, 15:38 IST

ಕಲಬುರ್ಗಿ: ಇಲ್ಲಿನ ಬುದ್ಧ ವಿಹಾರದಲ್ಲಿ ಅ.25ರಂದು ಆಯೋಜಿಸಿದ್ದ ‘ಧರ್ಮಚಕ್ರ ಪ್ರವರ್ತನ’ ಕಾರ್ಯಕ್ರಮವನ್ನು ಕೊರೊನಾ ಹಿನ್ನೆಲೆಯಲ್ಲಿ ರದ್ದು ಪಡಿಸಲಾಗಿದೆ ಎಂದು ಸಿದ್ಧಾರ್ಥ ವಿಹಾರ ಟ್ರಸ್ಟ್‌ನ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ನಡೆಯಬೇಕಾಗಿದ್ದ ಸಾಮೂಹಿಕ ಪ್ರಾರ್ಥನೆ, ಧಮ್ಮಪ್ರವಚನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಉಪಾಸಕರು ತಮ್ಮ ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT