ADVERTISEMENT

‘ಮಾನಸಿಕ ಸ್ಥಿಮಿತ ಕಳೆದುಕೊಂಡ ಈಶ್ವರಪ್ಪ’

​ಪ್ರಜಾವಾಣಿ ವಾರ್ತೆ
Published 7 ಮೇ 2019, 20:00 IST
Last Updated 7 ಮೇ 2019, 20:00 IST
ದಿನೇಶ್‌ ಗುಂಡೂರಾವ್‌
ದಿನೇಶ್‌ ಗುಂಡೂರಾವ್‌   

ಕಲಬುರ್ಗಿ: ‘ಅತ್ಯಾಚಾರದ ಬಗ್ಗೆ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪನವರ ಹೇಳಿಕೆ ನೋಡಿದರೆ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಂತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಶ್ವರಪ್ಪನವರ ಮನಸ್ಸಿನಲ್ಲಿ ಒಳ್ಳೆಯ ವಿಚಾರಗಳು ಇವೆಯೋ, ಇಲ್ಲವೋ ಗೊತ್ತಿಲ್ಲ. ಮಹಿಳೆಯರಿಗೆ ಅವಮಾನ ಮಾಡುವ ರೀತಿಯಲ್ಲಿ ಅವರು ಮಾತನಾಡಿದ್ದಾರೆ. ತಮ್ಮ ಹೇಳಿಕೆ ಬಗ್ಗೆ ಈಶ್ವರಪ್ಪವರು ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಬಿಜೆಪಿಯವರು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಕುಂದಗೋಳದಲ್ಲಿ ಈಚೆಗೆ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಈಶ್ವರಪ್ಪ, ‘ನಿನ್ನ ಮೊಮ್ಮಗಳ ಮೇಲೆ ಅತ್ಯಾಚಾರವಾಗಿದ್ದರೆ ಏನು ಮಾಡ್ತೀಯಾ’ ಎಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.