ADVERTISEMENT

ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2019, 7:33 IST
Last Updated 14 ಜೂನ್ 2019, 7:33 IST
   

ಕಲಬುರ್ಗಿ: ಕೊಲ್ಕತ್ತದ ಎನ್ಆರ್‌ಎಸ್‌ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯನಿರತ ಯುವ ವೈದ್ಯೆ ಡಾ. ಪ್ರತಿಭಾ ಮುಖರ್ಜಿ ಅವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಮುಷ್ಕರ ನಿರತರ ಮೇಲೆ ಹರಿಹಾಯ್ದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ‌ಮಮತಾ ಬ್ಯಾನರ್ಜಿ ವಿರುದ್ಧ ಕಿರಿಯ ವೈದ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ಡಾ.ವಿಜಯಕುಮಾರ್ ಕೆ., ಉಪಾಧ್ಯಕ್ಷರಾದ ಡಾ.ಅಮೋಲ್ ಪತಂಗೆ, ಡಾ.ಸಂಜನಾ ತಲ್ಲೂರ, ಕಾರ್ಯದರ್ಶಿ ಡಾ.ಗುರುಲಿಂಗಪ್ಪ ಪಾಟೀಲ ಸೇರಿದಂತೆ ಹಲವರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.