ಕಲಬುರ್ಗಿ: ಇಲ್ಲಿನ ಇಎಸ್ಐಸಿ ಆಸ್ಪತ್ರೆಯಲ್ಲಿ ತುರ್ತಾಗಿ ಆಮ್ಲಜನಕ ಘಟಕ ನಿರ್ಮಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಕೊರೊನಾ ಸೋಂಕಿತರಿಗೆ ಆಮ್ಲಜನಕದ ಕೊರತೆ ಉಂಟಾಗುತ್ತಿರುವುದನ್ನು ತಪ್ಪಿಸಲು ಈ ಪ್ಲ್ಯಾಂಟ್ ಕಾಮಗಾರಿಯನ್ನು ಶೀಘ್ರವೇ ಆರಂಭಸಿಬೇಕು. ಸಿವಿಲ್ ಮತ್ತು ವಿದ್ಯುತ್ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಂಡು ಮುಗಿಸಬೇಕು ಎಂದೂ ಸರ್ಕಾರದ ಆದೇಶದ ಪ್ರತಿಯಲ್ಲಿ ಸೂಚಿಸಲಾಗಿದೆ.
ಆಮ್ಲಜನಕದ ಕೊರತೆ ನೀಗಿಸುವ ಸಂಬಂಧ ರಾಜ್ಯದ ಜಿಲ್ಲಾಕೇಂದ್ರಗಳ 10 ಹಾಗೂ ತಾಲ್ಲೂಕು ಕೇಂದ್ರಗಳ 30 ಆಸ್ಪತ್ರೆಗಳು ಸೇರಿ ಒಟ್ಟು 40 ಆಸ್ಪತ್ರೆಗಳಲ್ಲಿ ಈ ಘಟಕ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಇದರಲ್ಲಿ ಇಎಸ್ಐಸಿ ಕೂಡ ಒಳಗೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.