ಕಲಬುರ್ಗಿ: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿ ಸಂಸ್ಥೆಗಳ ಅಧಿಕಾರವನ್ನು ಮೊಟಕುಗೊಳಿಸುವ ನಿರ್ಧಾರ ಕೈಗೊಂಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ’ ಎಂದು ವಿಧಾನ ಪರಿಷತ್ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರದ ಈ ನಿಲುವನ್ನು ಪ್ರಜ್ಞಾವಂತ ನಾಗರಿಕರು ವಿರೋಧಿಸಬೇಕು.ಅಧಿಕಾರ ವಿಕೇಂದ್ರಿಕರಣದ ಮೂಲ ಆಶಯಗಳೊಂದಿಗೆ ಪಂಚಾಯಿತಿಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳ ಅಧಿಕಾರವನ್ನು ಮೊಟಕುಗೊಳಿಸುವುದು ಸರಿಯಲ್ಲ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಆಯ್ಕೆಯಾಗುತ್ತಾರೆ. ಸರ್ಕಾರದ ಈ ನಿರ್ಧಾರದಿಂದ ಮಹಿಳೆಯರಿಗೂ ಹಿನ್ನಡೆ ಆಗಲಿದೆ. ಇದು ಮಹಿಳಾ ವಿರೋಧಿ ನೀತಿ‘ ಎಂದಿದ್ದಾರೆ.
ಪಂಚಾಯಿತಿ ಅಧಿಕಾರಕ್ಕೆ ತಡೆ ನೀಡುವಂತಹ ನಿರ್ಧಾರದಿಂದಸರ್ಕಾರ ಕೂಡಲೇ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.