ADVERTISEMENT

ಅಬಕಾರಿ ದಾಳಿ: ಕಳ್ಳಬಟ್ಟಿ ಜಪ್ತಿ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2020, 13:38 IST
Last Updated 15 ಆಗಸ್ಟ್ 2020, 13:38 IST

ಕಲಬುರ್ಗಿ: ಚಿತ್ತಾಪುರ ತಾಲ್ಲೂಕಿನ ಭೀಮನಳ್ಳಿ ತಾಂಡದ ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಸಿಬ್ಬಂದಿ 5 ಲೀಟರ್‌ ಕಳ್ಳಬಟ್ಟಿ ಸಾರಾಯಿ ಜಪ್ತಿ ಮಾಡಿದ್ದಾರೆ. 130 ಲೀಟರ್‌ ಬೆಲ್ಲದ ಕೊಳೆ ಕೂಡ ನಾಶಪಡಿಸಿದ್ದಾರೆ.

ತಾಂಡಾದ ಜೈನಾಬಾಯಿ ಸೇವು ರಾಠೋಡ ಅವರ ಮನೆಯಲ್ಲಿ ಈ ಕಳ್ಳಬಟ್ಟಿ ಪತ್ತೆಯಾಗಿದೆ. ಚಿತ್ತಾಪುರ ವಲಯ ಅಬಕಾರಿ ಎಸ್‌ಐ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ.

ಅಲ್ಲದೇ, ಶಹಾಬಾದ್‌ ಪಟ್ಟಣದ ಡಕ್ಕಾ ತಾಂಡಾ, ಸ್ಟೇಷನ್‌ ತಾಂಡಾ, ವಾಡಿ ಪಟ್ಟಣ ಮತ್ತು ಚಿತ್ತಾಪುರ ಪಟ್ಟಣದ ಹಲವಾರು ಕಡೆ ದಾಳಿ ನಡೆಸಿ ಪರಿಶೀಲಿಸಲಾಯಿತು. ಜತೆಗೆ,ಕಲಬುರ್ಗಿ ನಗರದ ಭರತನಗರ, ಮಂಗಾರವಾಡಿ ಹಾಗೂ ಸಣ್ಣೂರು ತಾಂಡಾ, ಆಶ್ರಯ ಕಾಲೊನಿ ಫಿಲ್ಟರ್‌ಬೆಡ್ ತಾಂಡಾದಲ್ಲಿಯೂ ದಾಳಿ ಮಾಡಿ ಪರಿಶೀಲನೆ ನಡೆಸಲಾಯಿತು. ಯಾವುದೇ ಅಕ್ರಮಗಳು ಕಂಡು ಬಂದಿರುವುದಿಲ್ಲ ಎಂದು ತಿಳಿಸಲಾಗಿದೆ.

ADVERTISEMENT

ಹಳೆಯ ಕಳ್ಳಬಟ್ಟಿ ಆರೋಪಿಗಳು ಹಾಗೂ ಅವರ ಮನೆಗಳನ್ನು ಪರಿಶೀಲನೆ ಮಾಡಲಾಗಿದೆ. ಯಾವುದೇ ಅಕ್ರಮಗಳು ಕಂಡು ಬಂದಿಲ್ಲ. ಅವರು ಕಳ್ಳಬಟ್ಟಿ ಸರಾಯಿ ತಯಾರಿಕೆ ಬಿಟ್ಟು ಕೂಲಿ ಕೆಲಸದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.