ಕಾಳಗಿ: ತಾಲ್ಲೂಕಿನ ಮಂಗಲಗಿ ಗ್ರಾಮದ ರೈತ ಶರ್ಫುದ್ದೀನ್ ಮುಸ್ತಫಾ ಎಂಬುವವರು ಸಾಲದಿಂದ ನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ಸಂಭವಿಸಿದೆ.
ಶರ್ಫುದ್ದೀನ್ ಅವರು ಮಂಗಲಗಿಯಲ್ಲಿ 5.8ಎಕರೆ ಜಮೀನು ಹೊಂದಿದ್ದರು. ಜಮೀನನ್ನು ಕಾಳಗಿ ಎಸ್ಬಿಐ ಬ್ಯಾಂಕ್ ಶಾಖೆಗೆ ಅಡವಿಟ್ಟು ಸಾಲ ಪಡೆದಿದ್ದರು. ಆದರೆ, ಮೂರು ವರ್ಷಗಳಿಂದ ಫಸಲು ಕೈಕೊಟ್ಟಿರುವುದರಿಂದ ಸಾಲ ತೀರಿಸುವುದು ಹೇಗೆ ಎಂಬ ಚಿಂತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.