ADVERTISEMENT

ಕಲಬುರ್ಗಿ: ರೈತ ಮುಖಂಡ ಮಾರುತಿ ಮಾನ್ಪಡೆ ನಿಧನ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2020, 6:37 IST
Last Updated 20 ಅಕ್ಟೋಬರ್ 2020, 6:37 IST
ಮಾರುತಿ ಮಾನ್ಪಡೆ
ಮಾರುತಿ ಮಾನ್ಪಡೆ    

ಕಲಬುರ್ಗಿ: ಕೋವಿಡ್‌ನಿಂದ ಬಳಲುತ್ತಿದ್ದ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ, ಹೋರಾಟಗಾರ ಮಾರುತಿ ಮಾನ್ಪಡೆ (65) ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಕೋವಿಡ್‌ ದೃಢಪಟ್ಟಿದ್ದರಿಂದ ಒಂದು ದಿನ ಕಲಬುರ್ಗಿಯ ಜಿಮ್ಸ್‌ನಲ್ಲಿ ದಾಖಲಾಗಿದ್ದ ಅವರು, ಅ.5ರಂದು ಸೊಲ್ಲಾಪುರದ ಅಶ್ವಿನಿ ಆಸ್ಪತ್ರೆಗೆ ದಾಖಲಾಗಿದ್ದರು. ಮೂರು ದಿನಗಳಿಂದ ವೆಂಟಿಲೇಟರ್‌ನಲ್ಲಿ ಇದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT