ADVERTISEMENT

ಕಲಬುರ್ಗಿ: ಬೆಳೆ ನಾಶ, ₹ 25 ಸಾವಿರ ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 16:12 IST
Last Updated 26 ಸೆಪ್ಟೆಂಬರ್ 2020, 16:12 IST

ಕಲಬುರ್ಗಿ: ‘ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಮುಂಗರಿನ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿ ಎಕರೆಗೆ ₹ 25 ಸಾವಿರ ಪರಿಹಾರ ಘೋಷಿಸಬೇಕು’ ಎಂದು ಜೆಡಿಎಸ್‌ ಜಿಲ್ಲಾ ಘಟಕದ ರೈತ ವಿಭಾಗದ ಅಧ್ಯಕ್ಷ ಭೀಮರಾಯ ನಾಟೀಕಾರ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

‘ಒಂದೆಡೆ ಬೆಳೆ ನಾಶ ಇನ್ನೊಂದೆಡೆ ಕೋವಿಡ್ ಸಂಕಷ್ಟದಿಂದ ರೈತರು ಕಂಗಾಲಾಗಿದ್ದಾರೆ. ಜೀವನ ಸಾಗಿಸಲು ಬಹಳಷ್ಟು ಕಷ್ಟದಲ್ಲಿದ್ದು, ಅವರಿಗೆ ಸರ್ಕಾರದಿಂದ ₹ 5 ಲಕ್ಷದವರಗೆ ಬಡ್ಡಿರಹಿತವಾಗಿ ಸಾಲ ಒದಗಿಸಬೇಕು’ ಎಂದು ಅವರು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳುಳಿಗೆ ತಿದ್ದುಪಡಿ ತರುವ ಮೂಲಕ ಜನರಿಗೆ ಅನ್ಯಾಯ ಮಾಡುತ್ತಿದೆ. ಸ್ವತಃ ಪ್ರಜೆಗಳಿಗೇ ಬೇಡವಾದ ಕಾಯ್ದೆಗಳ ತಿದ್ದುಪಡಿ ಸರ್ಕಾರಕ್ಕೆ ಏಕೆ ಬೇಕು? ಈ ತಿದ್ದುಪಡಿಗಳಿಂದಾಗಿ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಅನ್ಯಾಯವಾಗುತ್ತದೆ. ದೇಸಿ ಸ್ಥಳೀಯ ವರ್ತಕರು ಬೀದಿಪಾಲಾಗುತ್ತಾರೆ. ಆದ್ದರಿಂದ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

ADVERTISEMENT

ಪಕ್ಷದ ಮುಖಂಡರಾದ ಶಾಮರಾವ್ ಸೂರನ್, ಶಂಕರ ಕಟ್ಟಿ ಸಂಗಾವಿ, ಮೈನೂದ್ದೀನ್ ಶೇಖ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.