ಜೇವರ್ಗಿ: ನಾಡಪಿಸ್ತೂಲ್ ಇಟ್ಟುಕೊಂಡು ಕೋಳಕೂರ ಕ್ರಾಸ್ ಹತ್ತಿರದ ವರ್ತುಳ ರಸ್ತೆಯಲ್ಲಿ ತಿರುಗಾಡುತ್ತಿದ್ದ ಆರೋಪಿಯೊಬ್ಬನನ್ನು ಜೇವರ್ಗಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಪಟ್ಟಣದ ಖಾಜಾ ಕಾಲೊನಿ ನಿವಾಸಿ, ಆಟೊ ಚಾಲಕ ರಾಕೇಶ ಕರಬಸಪ್ಪ ಗುಡೂರ (28) ಬಂಧಿತ. ಅವರ ಬಳಿ ₹ 15 ಸಾವಿರ ಮೌಲ್ಯದ ನಾಡಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಾಕೇಶನನ್ನು ಗುರುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.