ADVERTISEMENT

5 ವರ್ಷದ ಬಾಲಕ ಮಠದ ಉತ್ತರಾಧಿಕಾರಿ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 16:13 IST
Last Updated 13 ಜುಲೈ 2021, 16:13 IST
ಕಲಬುರ್ಗಿ ಜಿಲ್ಲೆ ಕಾಳಗಿಯ ಸಂಸ್ಥಾನ ಹಿರೇಮಠದ ಉತ್ತರಾಧಿಕಾರಿಯಾಗಿ ಐದು ವರ್ಷದ ಬಾಲಕ ನೀಲಕಂಠ ಹಿರೇಮಠ ಅವರನ್ನು ವಿವಿಧ ಮಠಗಳ ಸ್ವಾಮೀಜಿಗಳು ನೇಮಿಸಿದರು
ಕಲಬುರ್ಗಿ ಜಿಲ್ಲೆ ಕಾಳಗಿಯ ಸಂಸ್ಥಾನ ಹಿರೇಮಠದ ಉತ್ತರಾಧಿಕಾರಿಯಾಗಿ ಐದು ವರ್ಷದ ಬಾಲಕ ನೀಲಕಂಠ ಹಿರೇಮಠ ಅವರನ್ನು ವಿವಿಧ ಮಠಗಳ ಸ್ವಾಮೀಜಿಗಳು ನೇಮಿಸಿದರು   

ಕಾಳಗಿ (ಕಲಬುರ್ಗಿ ಜಿಲ್ಲೆ): ಇಲ್ಲಿಯ ಸಂಸ್ಥಾನ ಹಿರೇಮಠದಲ್ಲಿ ಸೋಮವಾರ ಹೃದಯಾಘಾತದಿಂದ ಲಿಂಗೈಕ್ಯರಾದ ಪೀಠಾಧಿಪತಿ ಶಿವಬಸವ ಶಿವಾಚಾರ್ಯರ (45) ಉತ್ತರಾಧಿಕಾರಿಯಾಗಿ ಅವರ ಪೂರ್ವಾಶ್ರಮದ ಸಹೋದರ ಗುರುನಂಜಯ್ಯ ಹಿರೇಮಠ ಅವರ ಮಗ, ಐದು ವರ್ಷದ ಬಾಲಕ ನೀಲಕಂಠ ಅವರನ್ನು ನೇಮಿಸಲಾಯಿತು.

ಹಿರೇನಾಗಾಂವ ಮಠದ ಶ್ರೀಗಳು ಮಂಗಳವಾರ, ಶಿವಬಸವ ಶಿವಾಚಾರ್ಯರ ತಲೆಯ ಮೇಲಿದ್ದ ಹಸಿರು ಶಾಲು, ಕೈಯಲ್ಲಿದ್ದ ಬೆತ್ತವನ್ನು ಉತ್ತರಾಧಿಕಾರಿಗೆ ಹಸ್ತಾಂತರಿಸಿದರು.

‘ಪೀಠಾಧಿಪತಿ ನಿಧನದ ನಂತರ ಉತ್ತರಾಧಿಕಾರಿ ಸ್ಥಾನ ಖಾಲಿ ಬಿಡುವಂತಿಲ್ಲ. ಹೀಗಾಗಿ ನೇಮಿಸಲಾಗಿದೆ’ ಎಂದು ಭಕ್ತರು ಹೇಳಿದರು. ಶಿವಬಸವ ಶಿವಾಚಾರ್ಯರ ಅಂತ್ಯಕ್ರಿಯೆಯು ಪಂಚಾಚಾರ್ಯರ ತತ್ವದಂತೆ ಮಠದ ಆವರಣದಲ್ಲಿ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.