ಕಲಬುರ್ಗಿ: ಉಡಾನ್ ಯೋಜನೆಯಡಿ ಕಲಬುರ್ಗಿ–ತಿರುಪತಿ ಮಧ್ಯೆ ಮೊದಲ ವಿಮಾನ ಸಂಚಾರ ಸೋಮವಾರ ಆರಂಭವಾಯಿತು.
ಸಂಸದ ಡಾ.ಉಮೇಶ ಜಾಧವ್ ಅವರು ಮೊದಲ ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ನೀಡುವ ಮೂಲಕ ವಿಮಾನಸೇವೆಗೆ ಚಾಲನೆ ನೀಡಿದರು.
50 ಆಸನ ಸಾಮರ್ಥ್ಯದ ಈ ವಿಮಾನದಲ್ಲಿ 41 ಜನ ಪ್ರಯಾಣಿಸಿದರು. ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಎಚ್ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ, ವಿಮಾನ ನಿಲ್ದಾಣ ನಿರ್ದೇಶಕ ಜ್ಞಾನೇಶ್ವರರಾವ್, ಸ್ಟಾರ್ ಏರ್ ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಇದ್ದರು.
ಈ ವಿಮಾನವು ಸೋಮವಾರ, ಬುಧವಾರ, ಶುಕ್ರವಾರ ಹಾಗೂ ಭಾನುವಾರ ಸಂಚರಿಸಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.