ADVERTISEMENT

‘ನೆರೆ– ಬರ ಎರಡನ್ನೂ ಎದುರಿಸಲು ಸಿದ್ಧರಾಗಿ’

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2019, 19:47 IST
Last Updated 9 ಆಗಸ್ಟ್ 2019, 19:47 IST
ಕಲಬುರ್ಗಿಯಲ್ಲಿ ಶುಕ್ರವಾರ ಸಂಸದ ಡಾ.ಉಮೇಶ ಜಾಧವ ಅವರು ಪ್ರವಾಹ ಪೀಡಿತ ಸ್ಥಳದ ನಕ್ಷೆ ವೀಕ್ಷಿಸಿದರು
ಕಲಬುರ್ಗಿಯಲ್ಲಿ ಶುಕ್ರವಾರ ಸಂಸದ ಡಾ.ಉಮೇಶ ಜಾಧವ ಅವರು ಪ್ರವಾಹ ಪೀಡಿತ ಸ್ಥಳದ ನಕ್ಷೆ ವೀಕ್ಷಿಸಿದರು   

ಕಲಬುರ್ಗಿ: ‘ಪ್ರವಾಹದಿಂದ ಜಿಲ್ಲೆಯ ನಾಲ್ಕು ತಾಲ್ಲೂಕುಗಳು ತತ್ತರಿಸಿವೆ. ಉಳಿದ ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಈ ಎರಡೂ ಪರಿಸ್ಥಿತಿಗಳನ್ನು ಎದುರಿಸಲು ಅಧಿಕಾರಿಗಳು ಸಿದ್ಧರಾಗಬೇಕು’ ಎಂದು ಸಂಸದ ಡಾ.ಉಮೇಶ ಜಾಧವ ಸೂಚಿಸಿದರು.

‘ಹಲವು ಗ್ರಾಮಗಳಲ್ಲಿ ಇನ್ನೂ ಕುಡಿಯುವ ನೀರಿನ ಸಮಸ್ಯೆ ಇದೆ. ನೀರು ಪೂರೈಸುವ ಟ್ಯಾಂಕರ್ ಸ್ಥಗಿತಗೊಳಿಸಲಾಗಿದೆ ಎಂದು ಸಾರ್ವಜನಿಕರಿಂದ ದೂರು ಕೇಳಿಬರುತ್ತಿದೆ. ನೀರಿನ ಸಮಸ್ಯೆ ಇರುವ ಕಡೆ ನಿರಂತರ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು’ ಎಂದು ಅವರು ನಗರದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ತಿಳಿಸಿದರು.

‘ಪ್ರವಾಹ ಪೀಡಿತ ಸ್ಥಳಗಳಲ್ಲಿ ಸಾಂಕ್ರಾಮಿಕ ರೋಗ ತಡೆಗೆ ವೈದ್ಯಕೀಯ ತಂಡ, ಜಾನುವಾರಗಳ ರಕ್ಷಣೆಗೆ ಪಶು ಇಲಾಖೆಯಿಂದ ವ್ಯಾಕ್ಸಿನ್ ನೀಡಲು ತಂಡ ರಚಿಸಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.