ADVERTISEMENT

ಮುಡಬೂಳ ಕೊಲೆ ಪ್ರಕರಣ; ಮತ್ತೆ ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 23 ಜೂನ್ 2022, 3:00 IST
Last Updated 23 ಜೂನ್ 2022, 3:00 IST

ಚಿತ್ತಾಪುರ: ತಾಲ್ಲೂಕಿನ ಮುಡಬೂಳ ಗ್ರಾಮದ ವಿಶ್ವನಾಥ ಅಣ್ಣಾರಾವ್ ಸಂಗಾವಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು, ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

‘ಆರೋಪಿಗಳಾದ ಸಂಜು ಶಿವಮುದ್ರಪ್ಪ ಸಣ್ಣೂರಕರ್(36), ಸುಶೀಲ ದೇವಿಂದ್ರಪ್ಪ ಅಂಬೇಕರ್ (36), ಸಾಬಣ್ಣ ಅಣ್ಣಾರಾವ ಸಣ್ಣೂರಕರ್ (24) ಮತ್ತು ಸಿದ್ದಣ್ಣ ಬಸವರಾಜ ಸಣ್ಣೂರಕರ್ (36) ಎಂಬುವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 17 ಆರೋಪಿಗಳನ್ನು ಬಂಧಿಸಿದಂತೆ ಆಗಿದೆ. ತಲೆ ಮರೆಸಿಕೊಂಡಿದ್ದಪ್ರಕರಣದ ಪ್ರಮುಖ ಆರೋಪಿಯ ಪತ್ನಿಯನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಯಿತು. ಇದರಿಂದ ಕೆಲ ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿತು. ತಲೆ ಮರೆಸಿಕೊಂಡು ಓಡಾತ್ತಿರುವವರ ಪತ್ತೆಗೆ ಹುಡುಕಾಟ ನಡೆದಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.