ADVERTISEMENT

ಲಸಿಕೆ ಪಡೆದು ಆರೋಗ್ಯವಾಗಿರಿ:ತೆಲ್ಕೂರ

ಅಡಕಿ: ತಾಲ್ಲೂಕು ಆಡಳಿತದಿಂದ ಲಸಿಕೆ ಅಭಿಯಾನ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 2:31 IST
Last Updated 15 ಜೂನ್ 2021, 2:31 IST
ಸೇಡಂ ತಾಲ್ಲೂಕು ಆಡಕಿ ಗ್ರಾಮದಲ್ಲಿ ಸೋಮವಾರ ನಡೆದ ವ್ಯಾಕ್ಸಿನ್ ಲಸಿಕಾ ಅಭಿಯಾನದಲ್ಲಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಮಾತನಾಡಿದರು
ಸೇಡಂ ತಾಲ್ಲೂಕು ಆಡಕಿ ಗ್ರಾಮದಲ್ಲಿ ಸೋಮವಾರ ನಡೆದ ವ್ಯಾಕ್ಸಿನ್ ಲಸಿಕಾ ಅಭಿಯಾನದಲ್ಲಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಮಾತನಾಡಿದರು   

ಆಡಕಿ(ಸೇಡಂ): ‘ಪ್ರತಿಯೊಬ್ಬರೂ ಲಸಿಕೆ ಪಡೆದುಕೊಂಡಲ್ಲಿ ಕೊರೊನಾದಿಂದ ದೂರ ಉಳಿದು ಆರೋಗ್ಯವಾಗಿರಬಹುದು. ಮೂಢನಂಬಿಕೆಗೆ ಒಳಗಾಗದ ಲಸಿಕೆ ಪಡೆದುಕೊಳ್ಳಬೇಕು’ ಎಂದು ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಹೇಳಿದರು.

ತಾಲ್ಲೂಕಿನ ಆಡಕಿ ಗ್ರಾಮದಲ್ಲಿ ಸೋಮವಾರ ತಾಲ್ಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಆಯೋಜಿಸಿದ್ಧ ಲಸಿಕಾ ಅಭಿಯಾನದಲ್ಲಿ ಅವರು ಮಾತನಾಡಿದರು.

‘ಲಸಿಕೆ ಪಡೆದುಕೊಳ್ಳುವುದರಿಂದ ದೇಶ, ರಾಜ್ಯ ಮತ್ತು ತಾಲ್ಲೂಕಿನಲ್ಲಿ ಕೊರೊನಾ ಸೋಂಕಿತರ ಸಾವಿನ ಪ್ರಮಾಣ ಇಳಿಕೆಯಾಗುತ್ತಿದೆ. ಲಸಿಕೆ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಬೇಕು’ ಎಂದರು.

ADVERTISEMENT

ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುರೇಶ ಮೇಕಿನ್, ಡಿವೈಎಸ್‌ಪಿ ಬಸವರಾಜ ನಿಲಾರ್, ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಘಟಕ ಅಧ್ಯಕ್ಷ ಲಕ್ಷ್ಮಿನಾರಾಯಣ ಚಿಮ್ಮನಚೋಡ್ಕರ್, ಶಿವಲಿಂಗರೆಡ್ಡಿ ಬೆನಕನಹಳ್ಳಿ, ನಾಗರೆಡ್ಡಿ ದೇಶಮುಖ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ಸಾಯಿರೆಡ್ಡಿ ಮನ್ನೆ, ಉಪಾಧ್ಯಕ್ಷ ವಿಜಯಕುಮಾರ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.