ADVERTISEMENT

ಗೌಡಗಾಂವ: ಧರ್ಮಸಭೆ ಇಂದು

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2023, 20:35 IST
Last Updated 3 ನವೆಂಬರ್ 2023, 20:35 IST
ರಾಮಲಿಂಗಯ್ಯ ಸ್ವಾಮಿ ಗವಾಯಿ
ರಾಮಲಿಂಗಯ್ಯ ಸ್ವಾಮಿ ಗವಾಯಿ   

ಕಲಬುರಗಿ: ಅಫಜಲಪುರ ತಾಲ್ಲೂಕಿನ ಗೌಡಗಾಂವದಲ್ಲಿ ಹಿರಿಯ ಕಲಾವಿದ ರಾಮಲಿಂಗಯ್ಯ ಸ್ವಾಮಿ ಗವಾಯಿಗಳ ಮೂರನೇ ಪುಣ್ಯಸ್ಮರಣೆ ಅಂಗವಾಗಿ ಶನಿವಾರ (ನ.4) ಸಂಜೆ 5 ಗಂಟೆಗೆ ಧರ್ಮಸಭೆ ನಡೆಯಲಿದೆ.

ಚಿನ್ಮಯಗಿರಿ ಮಹಾಂತಪುರ ಸಿದ್ದರಾಮ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಬಡದಾಳ ಚನ್ನಮಲ್ಲ ಶಿವಾಚಾರ್ಯರು ನೇತೃತ್ವ ವಹಿಸುವರು. ರುದ್ರಮುನಿ ಶಿವಾಚಾರ್ಯರು ಕಡಕೋಳ, ಅಭಿನವ ರಾಚೋಟೇಶ್ವರ ಶಿವಾಚಾರ್ಯರು, ರಾಮಲಿಂಗಯ್ಯ ಸ್ವಾಮಿ ಸಮ್ಮುಖ ವಹಿಸುವರು. ಗುಂಡೂರಾವ ಮುತ್ಯಾ ಹುಣಸಿಹಡಗಿಲ ಅಧ್ಯಕ್ಷತೆ ವಹಿಸುವರು. ಶಾಸಕ ಎಂ.ವೈ.ಪಾಟೀಲ ಉದ್ಘಾಟಿಸುವರು.

ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಮಾಜಿ ಶಾಸಕ ಸುಭಾಷ್ ಗುತ್ತೇದಾರ, ಕೇದಾರಲಿಂಗಯ್ಯ ಹಿರೇಮಠ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮೀನಾಕ್ಷಿ ಬಾಳಿ ವಿಶೇಷ ಉಪನ್ಯಾಸ ನೀಡುವರು. ಖ್ಯಾತ ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.