ಕಲಬುರ್ಗಿ: ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದೆ ಎನ್ನಲಾದ ಸಿ.ಡಿ. ಪ್ರಕರಣ ಕುರಿತ ಎಸ್ಐಟಿ ತನಿಖೆ ನ್ಯಾಯಸಮ್ಮತವಾಗಿ ನಡೆಯಲಿದೆ.
ಈ ಬಗ್ಗೆ ಯುವತಿಗೆ ಅನಗತ್ಯ ಸಂದೇಹ ಬೇಡ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯ ಸಮ್ಮತ ಕೆಲಸ ಮಾಡಲು ಸೂಚನೆ ನೀಡಿದ್ದೇನೆ. ನಾವು ಸತ್ಯದ ಪರವಾಗಿದ್ದೇವೆ.
ಯಾರ ಪರ ಅಥವಾ ವಿರೋಧವಾಗಿ ಇಲ್ಲ. ಅಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಏನಾದರೂ ಇದ್ದರೆ ಎಸ್.ಐ.ಟಿ ಅವರೇ ಹೇಳುತ್ತಾರೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.