ಕಲಬುರಗಿ: ನಗರದಲ್ಲಿ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಭಾನುವಾರ ಮಧ್ಯಾಹ್ನದಿಂದ ಧಾರಾಕಾರ ಮಳೆ ಸುರಿಯುತ್ತಿದೆ.ಗುಡುಗು, ಸಿಡಿಲಿನ ಆರ್ಭಟವೂ ಜೋರಾಗಿದೆ.
ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದರಿಂದ ಬಹುತೇಕ ಜಲಾಶಯಗಳು ಶೇ 80ರಷ್ಟು ಭರ್ತಿಯಾಗಿವೆ.
ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದ್ದು, ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿ ಬೆಳೆ ಕೊಳೆತು ಹೋಗುತ್ತಿದೆ.
ಜಿಲ್ಲೆಯಾದ್ಯಂತ ಮಳೆ ಸಂಬಂಧಿ ಅವಘಡದಿಂದಾಗಿ ಆರು ಜನ ಸಾವಿಗೀಡಾಗಿದ್ದಾರೆ. 1,443 ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.