ADVERTISEMENT

ಮಳಖೇಡ ಸೇತುವೆ ಮೇಲೆ‌ ಸಂಚಾರ ಬಂದ್

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 16:58 IST
Last Updated 15 ಸೆಪ್ಟೆಂಬರ್ 2020, 16:58 IST

ಕಲಬುರ್ಗಿ: ನಗರದಿಂದ ಸೇಡಂ, ಗುರುಮಠಕಲ್ ಹಾಗೂ ಹೈದರಾಬಾದ್ ಗೆ ತೆರಳುವ ಮಾರ್ಗದಲ್ಲಿ ಬರುವ ಮಳಖೇಡ ಸೇತುವೆಯನ್ನು ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ರಾತ್ರಿ ಬಂದ್ ಮಾಡಲಾಗಿದೆ.

ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗಿನ ಜಾವದವರೆಗೆ ಭಾರಿ ಮಳೆಯಾಗಿದ್ದರಿಂದ ಮಳಖೇಡ ಬಳಿ ಹರಿಯುವ ಕಾಗಿಣಾ ನದಿ ತುಂಬಿ ಹರಿಯುತ್ತಿದೆ. ಯಾವುದೇ ಕ್ಷಣದಲ್ಲಿ ನೀರು ಸೇತುವೆ ಮೇಲೆ ಬರುವ ಸಂಭವವಿದೆ. ಹೀಗಾಗಿ ಸೇತುವೆಯ ಮೇಲಿನಿಂದ ಸಾರ್ವಜನಿಕ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು‌ ಮಲಖೇಡ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT