ಕಲಬುರ್ಗಿ: ಜಿಲ್ಲೆಯ ಸೇಡಂ, ಚಿತ್ತಾಪುರ, ಕಾಳಗಿ ತಾಲ್ಲೂಕಿನ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುತ್ತಿದೆ.
ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿ, ಮಾಡಬೂಳ, ಸೇಡಂ ಪಟ್ಟಣ ಸೇರಿದಂತೆ ತಾಲ್ಲೂಕಿನ ಮಳಖೇಡ, ಹೂಡಾ (ಬಿ), ಸಂಗಾವಿಯಲ್ಲಿ ಸುಮಾರು ಅರ್ಧಗಂಟೆಯಿಂದ ಮಳೆ ಸುರಿಯತ್ತಿದೆ.
ಕಳೆದ ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಾಗಿಣಾ ಮತ್ತು ಕಮಲಾವತಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.
ಕಾಗಿಣಾದಲ್ಲಿ ಪ್ರವಾಹ ಉಂಟಾಗಿರುವುದರಿಂದ ಶುಕ್ರವಾರ ನೀರು ಪಾಲಾದ ಸೇಡಂ ತಾಲ್ಲೂಕಿನ ಸಂಗಾವಿ (ಎಂ) ಗ್ರಾಮದ ಮಾಣಿಕವ್ವ (28) ಅವರನ್ನು ಪತ್ತೆ ಹಚ್ಚುವ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಭಾನುವಾರವೂ ಕಾರ್ಯಾಚರಣೆ ಮುಂದುವರಿದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.