ಕಲಬುರಗಿ: ತಾಲ್ಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ಜೂನ್ 12ರಂದು ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಗುತ್ತಿದ್ದು, ರೆಡ್ಡಿ ಸಮಾಜದ ರಾಜ್ಯ ಘಟಕದ ಅಧ್ಯಕ್ಷ, ಶಾಸಕ ರಾಮಲಿಂಗಾರೆಡ್ಡಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಗ್ರಾಮದ ರೆಡ್ಡಿ ಸಮಾಜದ ಮುಖಂಡ ರುಕ್ಮಣ್ಣ ರೆಡ್ಡಿ ತಿಳಿಸಿದ್ದಾರೆ.
‘ಬೆಳಿಗ್ಗೆ 10.30ಕ್ಕೆ ಮಲ್ಲಮ್ಮ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಗ್ರಾಮದ ಚನ್ನವೀರ ವಿರಕ್ತಮಠದ ಆವರಣದ ಕಲ್ಯಾಣ ಮಂಟಪದಲ್ಲಿ ಸಮಾರಂಭ ನಡೆಯಲಿದೆ. ಸಮಾಜದ ಮುಖಂಡರಾದ ಬಾಬುರಾವ ಆರ್. ರೆಡ್ಡಿ ವೈಜಾಪುರ, ರಘುನಾಥ ರೆಡ್ಡಿ, ಶರಣು ರೆಡ್ಡಿ ವೈಜಾಪುರ, ಬಸವರಾಜ ರೆಡ್ಡಿ ಸೇರಿದಂತೆ ಇತರರು ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.