ಚಿಂಚೋಳಿ: ತಾಲ್ಲೂಕಿನ ಐನೋಳ್ಳಿಯಲ್ಲಿ ಗೃಹಿಣಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಸ್ವಪ್ನಾ ಶಂಕರ ಹುಡಗಿ (28) ಮೃತ ದುರ್ದೈವಿ. ಗಂಡ, ಅತ್ತೆ, ಮಾವ ಮತ್ತು ಮನೆಯವರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಮೃತಳ ಪೋಷಕರು ದೂರಿದ್ದಾರೆ.
ತೆಲಂಗಾಣದ ಜಹೀರಾಬಾದನಿಂದ 8 ವರ್ಷಗಳ ಹಿಂದೆ ಐನೋಳ್ಳಿಯ ಶಂಕರ ಹುಡಗಿ ಅವರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಭಾನುವಾರ ಗಂಡನ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ.
ದಂಪತಿಗೆ ಒಂದು ಗಂಡು ಮಗುವಿದೆ. ಸ್ಥಳಕ್ಕೆ ಚಿಂಚೋಳಿ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜಶೇಖರ ರಾಠೋಡ್ ಭೇಟಿ ನೀಡಿ ಪರಿಶೀಲಿಸಿದರು.
ಪತಿ, ಅತ್ತೆ, ಮಾವ ಹಾಗೂ ಪತಿಯ ಸಹೋದರರು ಹಾಗೂ ಅವರ ಪತ್ನಿಯರು ಸೇರಿ 6 ಮಂದಿ ವಿರುದ್ಧ ಮೃತ ಸ್ವಪ್ನಾ ಪೋಷಕರು ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.