ADVERTISEMENT

ಕಲಬುರ್ಗಿ: ಪತ್ನಿಯನ್ನು ನೀರಿನ ಟ್ಯಾಂಕ್‌ನಲ್ಲಿ ಮುಳುಗಿಸಿ ಕೊಲೆ ಮಾಡಿದ ಪತಿ

ಆತ್ಮಹತ್ಯೆಯೆಂದು ಬಿಂಬಿಸಲು ಯತ್ನ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2021, 5:46 IST
Last Updated 1 ಫೆಬ್ರುವರಿ 2021, 5:46 IST
ಪ್ರೇಮಸಿಂಗ್ ರಾಠೋಡ ಮತ್ತು ಶೀತಲ್
ಪ್ರೇಮಸಿಂಗ್ ರಾಠೋಡ ಮತ್ತು ಶೀತಲ್   

ಕಲಬುರ್ಗಿ: ಇಲ್ಲಿನ ಹಳೆ ಜೇವರ್ಗಿ ರಸ್ತೆಯ ಉದಯನಗರದಲ್ಲಿ ಪತಿಯು ಪತ್ನಿಯನ್ನು ಕೊಲೆ ಮಾಡಿ, ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಘಟನೆ ನಡೆದಿದೆ.

ಉದಯನಗರದ ನಿವಾಸಿ ಪ್ರೇಮಸಿಂಗ್ ರಾಠೋಡ (37) ಕೊಲೆ ಆರೋಪಿ. ಪತ್ನಿ ಶೀತಲ್ (36) ಕೊಲೆಯಾದವರು. 16 ವರ್ಷಗಳ ಹಿಂದೆ ಮದುವೆಯಾಗಿದ್ದ ಇಬ್ಬರಿಗೂ ಮೂವರು ಮಕ್ಕಳಿದ್ದಾರೆ.

‘ಕಮಲಾಪುರ ದಿನಸಿ ತಾಂಡಾದ ಪ್ರೇಮಸಿಂಗ್ ಈಚೆಗೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ. ಪತ್ನಿಯೊಂದಿಗೆ ಆಗಾಗ್ಗೆ ಆತ ಜಗಳವಾಡುತ್ತಿದ್ದ. ಶನಿವಾರ ರಾತ್ರಿ 1.30ರ ಸುಮಾರಿಗೆ ಪತ್ನಿಯ ‌ಕತ್ತು ಹಿಸುಕಿ ಕೊಲೆ ಮಾಡಿ, ನೀರಿನ ಟ್ಯಾಂಕ್‌ನಲ್ಲಿ ಮುಳುಗಿಸಿದ್ದ. ನಂತರ ಪೊಲೀಸ್ ಠಾಣೆಗೆ ಬಂದು ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ. ಮನೆಗೆ ತೆರಳಿ, ಪರಿಶೀಲಿಸಿ ವಿಚಾರಣೆಗೆ ಒಳಪಡಿಸಿದಾಗ ಆತ ಕೊಲೆ ಮಾಡಿಕೊಂಡಿರುವುದಾಗಿ ಒಪ್ಪಿಕೊಂಡ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಪ್ರೇಮಸಿಂಗ್‌ಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು’ ಎಂದು ಶೀತಲ್ ಪೋಷಕರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.