ADVERTISEMENT

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಕೈಗಾರಿಕಾ ಭದ್ರತಾ ಪಡೆ ಪಿಎಸ್ಐ  ವಶಕ್ಕೆ

​ಪ್ರಜಾವಾಣಿ ವಾರ್ತೆ
Published 4 ಮೇ 2022, 5:07 IST
Last Updated 4 ಮೇ 2022, 5:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಭದ್ರತಾ ಪಡೆಯ ಪಿಎಸ್ಐ ಯಶವಂತ ಗೌಡ ಅವರನ್ನು ನಗರದಲ್ಲಿ ಸಿಐಡಿ ಪೊಲೀಸರು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಯಶವಂತಗೌಡ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಎಸ್ಐ ಆಗಿ ಆಯ್ಕೆಯಾಗಿ ಪ್ರಸ್ತುತ ಕಲಬುರಗಿಯ ನಾಗನಹಳ್ಳಿಯ ಪೊಲೀಸ್ ತರಬೇತಿ ಕೇಂದ್ರದಲ್ಲಿ ತರಬೇತಿಯಲ್ಲಿದ್ದರು‌.

ಬೆಂಗಳೂರಿನ ಕೇಂದ್ರದಲ್ಲಿ ಪರೀಕ್ಷೆ ಬರೆದು ಪಿಎಸ್ಐ ಸಿವಿಲ್ ಪರೀಕ್ಷೆಯಲ್ಲಿ ಪಾಸಾಗಿದ್ದರು. ಪಾಸಾದ ಬಗ್ಗೆ ಅನುಮಾನಗೊಂಡಿದ್ದ ಸಿಐಡಿ ಅಧಿಕಾರಿಗಳಿಗೆ ಯಶವಂತ ಗೌಡ ಏಪ್ರಿಲ್ 22ರಂದು ದಾಖಲೆಗಳನ್ನು ಸಲ್ಲಿಸಿ ತರಬೇತಿ ಕೇಂದ್ರಕ್ಕೆ ವಾಪಸಾಗಿದ್ದರು.

ADVERTISEMENT

ಮಂಗಳವಾರ ‌ಸಂಜೆ ಯಶವಂತ ಗೌಡ ಅವರನ್ನು ವಶಕ್ಕೆ ಪಡೆದು ಕೆಲ ಕಾಲ ವಿಚಾರಣೆ ನಡೆಸಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಇವುಗಳನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.