ವಾಡಿ: ಸತತ ಮಳೆಯಿಂದ ಕಾಗಿಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂಗಳಗಿ– ಶಹಾಬಾದ್ ನಡುವಿನ ರಸ್ತೆಯನ್ನು ಗುರುವಾರ ಸಂಜೆಯಿಂದ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಜನರು ಸಂಚರಿಸದಂತೆ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಗೂ ಮುಳ್ಳುಕಂಟಿಗಳನ್ನು ಹಾಕಲಾಗಿದೆ.
ಬೆಣ್ಣೆತೊರಾ ಜಲಾಶಯದಿಂದ 12 ಸಾವಿರ ಕ್ಯುಸೆಕ್ ನೀರು ಬಿಟ್ಟಿರುವುದರಿಂದ ನದಿಯಲ್ಲಿ ಪ್ರವಾಹ ಭಾರೀ ಹೆಚ್ಚಳವಾಗಿದೆ. ಸೇತುವೆ ಮೇಲೆ ನೀರು ಹರಿಯುತ್ತಿದೆ. ನದಿಗೆ ಮತ್ತಷ್ಟು ನೀರು ಹರಿದು ಬರುವ ಸಾಧ್ಯತೆ ಇದೆ. ಇಂಗಳಗಿ, ಕಡಬೂರು, ಕುಂದನೂರು ಸಹಿತ ನದಿ ದಂಡೆಯ ಜನರು ಅತ್ಯಂತ ಜಾಗೃತೆಯಿಂದ ಇರಬೇಕು. ಈ ರಸ್ತೆಯ ಮೇಲೆ ಸಂಚರಿಸುವ ಸಾಹಸ ಮಾಡಬಾರದು ಎಂದು ಸ್ಥಳೀಯ ಪಿಎಸ್ಐ ವಿಜಯಕುಮಾರ ಭಾವಗಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.