ಚಿತ್ತಾಪುರ (ಕಲಬುರಗಿ ಜಿಲ್ಲೆ): ಪಟ್ಟಣದ ಲಾಡ್ಜಿಂಗ್ ಕ್ರಾಸ್ ಸಮೀಪದಲ್ಲಿರುವ ಅಶ್ವಾರೂಢ ಬಸವೇಶ್ವರ ಮೂರ್ತಿಯ ಮುಖಕ್ಕೆ ಕಿಡಿಗೇಡಿಯೊಬ್ಬ ಟಿ–ಶರ್ಟ್ ಹಾಕಿ ಅವಮಾನಿಸಿದ್ದರಿಂದ ಗುರುವಾರ ಕೆಲ ಹೊತ್ತು ಪಟ್ಟಣದಲ್ಲಿ ಉದ್ರಿಕ್ತ ವಾತಾವರಣ ಸೃಷ್ಟಿಯಾಗಿತ್ತು.
ಲಿಂಗಾಯತ ಸಮಾಜದ ಮುಖಂಡರು ಘಟನೆಗೆ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಮದ್ಯದ ಅಮಲಿನಲ್ಲಿದ್ದ ಅಲಿ ಅಬ್ಬಾಸ್ ಎಂಬುವನನ್ನು ಹಿಡಿದು ಜನರು ವಿಚಾರಿಸಿದಾಗ, ಕೃತ್ಯವೆಸಗಿರುವುದು ಒಪ್ಪಿಕೊಂಡ. ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಿದರು. ‘ಪಟ್ಟಣದ ಆಶ್ರಯ ಬಡಾವಣೆಯ ನಿವಾಸಿ ಅಲಿ ಅಬ್ಬಾಸ್ಗೆ ವಿಚಾರಣೆಗೆ ಒಳಪಡಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.