ADVERTISEMENT

ಉಕ್ಕಿ ಹರಿದ ಕಾಗಿಣಾ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 9:04 IST
Last Updated 17 ಸೆಪ್ಟೆಂಬರ್ 2020, 9:04 IST
ಇಂಗಳಗಿ– ಶಹಾಬಾದ್ ಮಧ್ಯೆ ಹರಿಯುವ ಕಾಗಿಣಾ ನದಿಯು ತುಂಬಿ ಹರಿಯುತ್ತಿದ್ದು, ಸೇತುವೆ ಮೇಲೆ ನೀರು ಹರಿಯುತ್ತಿರುವುದು
ಇಂಗಳಗಿ– ಶಹಾಬಾದ್ ಮಧ್ಯೆ ಹರಿಯುವ ಕಾಗಿಣಾ ನದಿಯು ತುಂಬಿ ಹರಿಯುತ್ತಿದ್ದು, ಸೇತುವೆ ಮೇಲೆ ನೀರು ಹರಿಯುತ್ತಿರುವುದು   

ವಾಡಿ: ಸತತ ಮಳೆಯಿಂದ ಕಾಗಿಣಾ ನದಿ ಉಕ್ಕಿ ಹರಿಯುತ್ತಿದ್ದು ಇಂಗಳಗಿ– ಶಹಬಾದ್ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಬುಧವಾರ ನೀರಿನ ಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿ ಸೇತುವೆ ಮೇಲೆ ನೀರು ಹರಿಯುತ್ತಿದೆ. ಇದರಿಂದ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಹಲಕರ್ಟಿ ಗ್ರಾಮಕ್ಕೆ ಹೊಂದಿಕೊಂಡು ಸಾಗುವ ಹಳ್ಳಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ಹಲಕರ್ಟಿ, ಕೊಂಚೂರು, ಬಳವಡ್ಗಿ, ಕಡಬೂರು ಗ್ರಾಮಗಳಿಗೆ ನೀರು ಹೊಕ್ಕಿದೆ.

ಗ್ರಾಮಗಳ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ದವಸ ಧಾನ್ಯಗಳು ಹಾಳಾಗಿವೆ. ಹಲಕರ್ಟಿ-ದೇವಾಪೂರ, ವಾಡಿ-ಕೊಂಚೂರು, ವಾಡಿ-ಬಳವಡ್ಗಿ, ಹಾಗೂ ಕಡಬೂರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಇದರಿಂದ ಜನರು ಪರದಾಡಿದರು.

ADVERTISEMENT

ಹೊಲಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದರಿಂದ ತೊಗರಿ ಹಾಗೂ ಹತ್ತಿ ಬೆಳೆಗಳು ನೀರಲ್ಲಿ ನಿಂತಿದ್ದು, ರೈತರ ಚಿಂತೆಗೆ ಕಾರಣವಾಗಿದೆ. ಅಲ್ಲಲ್ಲಿ ತಗ್ಗುಪ್ರದೇಶಗಳಲ್ಲಿ ನೀರು ನಿಂತಿದ್ದು, ಕೆರೆಗಳಂತೆ ಭಾಸವಾಗುತ್ತಿದೆ. ಮಧ್ಯಾಹ್ನ ತಹಶೀಲ್ದಾರ್‌ ಉಮಾಕಾಂತ ಹಳ್ಳೆ ಬಳವಡ್ಗಿ ಗ್ರಾಮಕ್ಕೆ ಭೇಟಿ ನೀಡಿದ್ದು, ಸಂತ್ರಸ್ತರು ಉಳಿದುಕೊಳ್ಳಲು ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಸ್ಥಳೀಯ ಪಂಚಾಯತಿ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.