ADVERTISEMENT

ಬಜೆಟ್: ಶಾಸಕರೊಂದಿಗೆ ಸಚಿವ ಪ್ರಿಯಾಂಕ್ ಸಭೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 7:42 IST
Last Updated 23 ಜನವರಿ 2026, 7:42 IST
ಬೆಂಗಳೂರಿನಲ್ಲಿ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದರು. ತಿಪ್ಪಣ್ಣಪ್ಪ ಕಮಕನೂರ, ಅಲ್ಲಮಪ್ರಭು ಪಾಟೀಲ, ಡಾ. ಅಜಯ್ ಸಿಂಗ್, ಡಾ. ಶರಣಪ್ರಕಾಶ್ ಪಾಟೀಲ ಭಾಗವಹಿಸಿದ್ದರು
ಬೆಂಗಳೂರಿನಲ್ಲಿ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದರು. ತಿಪ್ಪಣ್ಣಪ್ಪ ಕಮಕನೂರ, ಅಲ್ಲಮಪ್ರಭು ಪಾಟೀಲ, ಡಾ. ಅಜಯ್ ಸಿಂಗ್, ಡಾ. ಶರಣಪ್ರಕಾಶ್ ಪಾಟೀಲ ಭಾಗವಹಿಸಿದ್ದರು   

ಕಲಬುರಗಿ: ಜಿಲ್ಲೆಗೆ ಸಂಬಂಧಿಸಿದಂತೆ ಮುಂಬರುವ ಬಜೆಟ್‌ನಲ್ಲಿ ರಸ್ತೆ, ಕುಡಿಯುವ ನೀರು ಮುಂತಾದ ಮಹತ್ತರ ಕಾರ್ಯಕ್ರಮಗಳನ್ನು ಸೇರಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಜಿಲ್ಲಾ ಶಾಸಕರೊಂದಿಗೆ ಬಜೆಟ್ ಪೂರ್ವ ಸಭೆ ನಡೆಸಿದರು. ಮೂಲಸೌಲಭ್ಯಗಳು ಸೇರಿದಂತೆ ಕೆಲವು ಶಾಶ್ವತ ಕಾಮಗಾರಿಗಳನ್ನು ತೆಗೆದುಕೊಳ್ಳಲು ಶಾಸಕರು ಹಲವಾರು ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಭಿವೃದ್ಧಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ.ವೈ.ಪಾಟೀಲ, ಬಿ.ಆರ್.ಪಾಟೀಲ, ಖನಿಜಾ ಫಾತಿಮಾ, ಚಂದ್ರಶೇಖರ ಪಾಟೀರ, ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT