ADVERTISEMENT

ಕಲಬುರ್ಗಿ: ಶಾಲಾ-ಕಾಲೇಜು ಮುಚ್ಚಿಸಿ: ನೌಕರರ ಸಂಘದಿಂದ ಡಿಸಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 16:27 IST
Last Updated 15 ಜುಲೈ 2020, 16:27 IST
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜು ಲೇಂಗಟಿ ಜಿಲ್ಲಾಧಿಕಾರಿ ಶರತ್‌ ಬಿ. ಅವರಿಗೆ ಮನವಿ ಸಲ್ಲಿಸಿದರು
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜು ಲೇಂಗಟಿ ಜಿಲ್ಲಾಧಿಕಾರಿ ಶರತ್‌ ಬಿ. ಅವರಿಗೆ ಮನವಿ ಸಲ್ಲಿಸಿದರು   

ಕಲಬುರ್ಗಿ: ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಲಾಕ್‌ಡೌನ್‌ ಘೋಷಿಸಿದ್ದು, ಈ ಅವಧಿಯಲ್ಲಿ ಶಾಲಾ–ಕಾಲೇಜುಗಳನ್ನು ಮುಚ್ಚುವಂತೆ ಆದೇಶ ಹೊರಡಿಸಬೇಕು ಎಂದುಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದವರು ಜಿಲ್ಲಾಧಿಕಾರಿ ಶರತ್ ಬಿ. ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

‘ಪ್ರಸ್ತುತ ಶಾಲಾ-ಕಾಲೇಜು, ತರಬೇತಿ ಸಂಸ್ಥೆ, ಕೋಚಿಂಗ್ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಲ್ಲದೆ ಶಿಕ್ಷಕರು ಮಾತ್ರ ಹಾಜರಾಗುತ್ತಿದ್ದಾರೆ. ಲಾಕ್ ಡೌನ್ ಪರಿಣಾಮ ಜಿಲ್ಲೆಯಾದ್ಯಂತ ಸರ್ಕಾರಿ ಮತ್ತು ಖಾಸಗಿ ವಾಹನ ಸೌಕರ್ಯವಿಲ್ಲದೆ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲು ತೊಂದರೆ ಅನುಭವಿಸುತ್ತಿದ್ದು, ಇದು ಅನಗತ್ಯ ಓಡಾಕ್ಕೂ ದಾರಿ ಮಾಡಿಕೊಟ್ಟಂತಾಗಿದೆ’ ಎಂದುಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಜು ಲೇಂಗಟಿ ಹೇಳಿದರು.

‘ಬೆಳಗಾವಿ ಜಿಲ್ಲೆಯಲ್ಲಿ ಲಾಕ್ ಡೌನ್ ಅವಧಿಯಲ್ಲಿ ಶಾಲಾ-ಕಾಲೇಜು ಮುಚ್ಚುವಂತೆ ಅಲ್ಲಿನ ಜಿಲ್ಲಾಧಿಕಾರಿ ಆದೇಶಿಸಿದ್ದು, ಅದೇ ರೀತಿಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲೂ ಆದೇಶ ಹೊರಡಿಸಬೇಕು ಎಂದು ಮನವಿ ಮಾಡಲಾಯಿತು. ಇದಕ್ಕೆ ಜಿಲ್ಲಾಧಿಕಾರಿ ಸಕರಾತ್ಮಕವಾಗಿ ಪ್ರತಿಕ್ರಿಯಿಸಿದರು’ ಎಂದು ಲೇಂಗಟಿ ತಿಳಿಸಿದ್ದಾರೆ.

ADVERTISEMENT

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಬಾಬು ಎ. ಮೌರ್ಯ, ಪ್ರಧಾನ ಕಾರ್ಯದರ್ಶಿ ವೆಂಕಟರಾವ ಇಟಗಿ, ಅಕ್ಷರ ದಾಸೋಹ ಅಧಿಕಾರಿ ಅಬ್ದುಲ್ ಗನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.