ADVERTISEMENT

ಕಲಬುರ್ಗಿ: ಸುಧಾಕರ್ ಲೋಖಂಡೆ ಪಾಲಿಕೆಯ ನೂತನ ಆಯುಕ್ತ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2020, 11:43 IST
Last Updated 25 ಆಗಸ್ಟ್ 2020, 11:43 IST

ಕಲಬುರ್ಗಿ: 2017ನೇ ಬ್ಯಾಚಿನ ಐಎಎಸ್‌ ಅಧಿಕಾರಿ ಸುಧಾಕರ ಸ್ನೇಹಲ್ ಲೋಖಂಡೆ ಅವರನ್ನು ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ರಾಜ್ಯ ಸರ್ಕಾರ ನೇಮಕಗೊಳಿಸಿ ಮಂಗಳವಾರ ಆದೇಶ ಹೊರಡಿಸಿದೆ.

ಲೋಖಂಡೆ ಅವರು ವಿಜಯಪುರ ಜಿಲ್ಲೆ ಇಂಡಿ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪಾಲಿಕೆಯ ಆಯುಕ್ತ ರಾಹುಲ್ ಪಾಂಡ್ವೆ ಅವರನ್ನು ಗುಲಬರ್ಗಾ ವಿದ್ಯುತ್‌ ಸರಬರಾಜು ಕಂಪನಿ (ಜೆಸ್ಕಾಂ)ಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಕೆಲ ದಿನಗಳ ಹಿಂದೆ ವರ್ಗಾಯಿಸಲಾಗಿತ್ತು. ಪಾಲಿಕೆಯ ಪ್ರಭಾರ ಆಯುಕ್ತರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ಲೋಖಂಡೆ ಅವರ ನೇಮಕದೊಂದಿಗೆ ಪಾಲಿಕೆಗೆ ಪೂರ್ಣ ಪ್ರಮಾಣದ ಆಯುಕ್ತರು ದೊರೆತಂತಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.