ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಒಂಟಿಚಿಂತಾ ಸಂಗಾಪುರ ಮಧ್ಯೆ ಬರುವ ಎತ್ತಿಪೋತೆ ಜಲಪಾತ ಮರು ಜೀವ ಪಡೆದಿದ್ದು ಶುಕ್ರವಾರ ಸುರಿದ ಭಾರಿ ಮಳೆಗೆ ಮೈದುಂಬಿ ಹರಿಯುತ್ತಿದೆ. ಜಲಪಾತದ ಮೇಲ್ಭಾಗದ ತೆಲಂಗಾಣದಲ್ಲಿ ಸುರಿದ ಮಳೆಯಿಂದ ಎತ್ತಿಪೋತೆ ನಾಲೆಗೆ ಪ್ರವಾಹ ಬಂದಿದೆ. ಇದರಿಂದ ಮೇಲಿಂದ ನೀರು ಬೀಳುವ ಎರಡು ತಾಣಗಳು ನಯನ ಮನೋಹರವಾಗಿ ಗೋಚರಿಸುತ್ತ ಪ್ರವಾಸಿಗರನ್ನು ಸೆಳೆಯುತ್ತಿವೆ. ಕುಂಚಾವರಂ ಕಾಡಿನಲ್ಲಿ ಬರುವ ಚಿಂಚೋಳಿ ವನ್ಯಜೀವಿ ಧಾಮದ ಪ್ರಕೃತಿಯ ರಮಣೀಯ ತಾಣ ಸುವರ್ಣ ವರ್ಣದ ನೀರಿನಿಂದ ಕಂಗೊಳಿಸುತ್ತಿದೆ – ಪ್ರಜಾವಾಣಿ ವಿಡಿಯೊ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.