ADVERTISEMENT

ಕಲಬುರಗಿ | ಸಾಲಬಾಧೆ; ವಿಷ ಕುಡಿದು ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2023, 8:21 IST
Last Updated 10 ಸೆಪ್ಟೆಂಬರ್ 2023, 8:21 IST
<div class="paragraphs"><p>ಮಲ್ಲೇಶಪ್ಪ ಕಲ್ಲಪ್ಪ</p></div>

ಮಲ್ಲೇಶಪ್ಪ ಕಲ್ಲಪ್ಪ

   

ಚಿಂಚೋಳಿ(ಕಲಬುರಗಿ ಜಿಲ್ಲೆ): ತಾಲ್ಲೂಕಿನ ಕನಕಪುರ ಗ್ರಾಮದಲ್ಲಿ ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಮುಂಗಾರು ಮಳೆ ಏರುಪೇರಾಗಿ ಬೆಳೆ ಕೈಕೊಟ್ಟಿದ್ದರಿಂದ ಕನಕಪುರ ಗ್ರಾಮದ ಮಲ್ಲೇಶಪ್ಪ ಕಲ್ಲಪ್ಪ(65) ವಿಷ ಕುಡಿದರು.

ADVERTISEMENT

ತಕ್ಷಣವೇ ಅವರನ್ನು ಕಲಬುರಗಿಯ ಜಿಮ್ಸ್‌ಗೆ ದಾಖಲಿಸಲಾಗಿತ್ತು‌‌. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ನಸುಕಿನ ಜಾವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಗ್ರಾಮದ ಮುಖಂಡ ಹಣಮಂತರಾವ್ ದೇಶಪಾಂಡೆ ತಿಳಿಸಿದ್ದಾರೆ.

ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಚಿಂಚೋಳಿ ಠಾಣೆಯ ಪೊಲೀಸರು ಆಸ್ಪತ್ರೆಗೆ ಧಾವಿಸಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಕೆಜಿಬಿ ಹಾಗೂ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘ ಸೇರಿದಂತೆ ವಿವಿಧೆಡೆ ₹ 8 ಲಕ್ಷ ಸಾಲವಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.