ADVERTISEMENT

ಕಲಬುರ್ಗಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಮೊಟಕು

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 11:06 IST
Last Updated 21 ಅಕ್ಟೋಬರ್ 2020, 11:06 IST
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ   

ಕಲಬುರ್ಗಿ: ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಮೊಟಕುಗೊಳಿಸಿದ್ದಾರೆ.

ಜಿಂದಾಲ್‌ ವಿಮಾನ ನಿಲ್ದಾಣದಿಂದ ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್‌ನಲ್ಲಿ ಕಲಬುರ್ಗಿಗೆ ಬಂದಿರುವ ಅವರು, ಇಲ್ಲಿಂದ ಆಲಮಟ್ಟಿಗೆ ಹೋಗಿ ಅಲ್ಲಿ ಸಭೆ ನಡೆಸಬೇಕಿತ್ತು. ಆದರೆ, ಹಮಾಮಾನ ಪ್ರತಿಕೂಲವಾಗಿರುವುದರಿಂದ ಆಲಮಟ್ಟಿಗೆ ತೆರಳುವುದನ್ನು ರದ್ದುಗೊಳಿಸಿದ್ದಾರೆ.

ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.