ADVERTISEMENT

ತುಂಬಿದ ವೀರ್ ಅಣೆಕಟ್ಟೆ: ನಾಳೆಯಿಂದ 15 ಸಾವಿರ ಕ್ಯುಸೆಕ್ ಹೊರಕ್ಕೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2020, 8:13 IST
Last Updated 13 ಆಗಸ್ಟ್ 2020, 8:13 IST
ಭೀಮಾ ನದಿಗೆ ನೀರು ಬಿಡುತ್ತಿರುವ ದೃಶ್ಯ
ಭೀಮಾ ನದಿಗೆ ನೀರು ಬಿಡುತ್ತಿರುವ ದೃಶ್ಯ   

ಕಲಬುರ್ಗಿ: ಮಹಾರಾಷ್ಟ್ರದ ವೀರ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರುವುದರಿಂದ ಹೆಚ್ಚುವರಿ ನೀರನ್ನು ಭೀಮಾ ನದಿಗೆ ಹರಿಸುತ್ತಿದ್ದು, ಇದೇ 14ರಂದು ನೀರು ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್ ತಲುಪಲಿದೆ ಎಂದು ‌ಭೀಮಾ ಏತ ನೀರಾವರಿ ಯೋಜನೆಯ ಅಫಜಲಪುರ ವಿಭಾಗದ ಕಾರ್ಯನಿರ್ವಾಹಕ ‌ಎಂಜಿನಿಯರ್ ಅಶೋಕ ಕಲಾಲ ತಿಳಿಸಿದ್ದಾರೆ.

ಇದರಿಂದಾಗಿ ಬ್ಯಾರೇಜಿನಿಂದ 12 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತದೆ. ನದಿ ಪಾತ್ರದಲ್ಲಿ ಬರುವ ಅಫಜಲಪುರ, ಜೇವರ್ಗಿ, ಚಿತ್ತಾಪುರ ತಾಲ್ಲೂಕಿನ ಗ್ರಾಮಸ್ಥರು ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT