ಅಫಜಲಪುರ (ಕಲಬುರಗಿ ಜಿಲ್ಲೆ): ಸಮೀಪದ ಅಫಜಲಪುರ- ಬಳೂರ್ಗಿ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಕಾರು ಮರಕ್ಕೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
ಐವರಲ್ಲಿ ನಾಲ್ವರು ಹಿಳೆಯರು ಹಾಗೂ ಒಬ್ಬ ಪುರುಷ ಇದ್ದಾರೆ. ಎಲ್ಲರೂ ಮಹಾರಾಷ್ಟ್ರದ ಅಹಮದಾಬಾದ್ ನಗರದ ನಿವಾಸಿಗಳು.
ಶುಕ್ರವಾರ ನಸುಕಿನಲ್ಲಿ ದೇವಲಗಾಣಗಾಪುರಕ್ಕೆ ಬಂದಿದ್ದ ಇವರು ದತ್ತಾತ್ರೇಯರ ದರ್ಶನ ಪಡೆದು ಮರಳುತ್ತಿದ್ದರು. ಎದುರಿಗೆ ಬಂದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ, ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿ ಉರುಳಿತು. ಅವಘಡದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಶವಗಳನ್ನು ಹೊರತೆಗೆಯಲು ಮುಂದಾಗಿದ್ದಾರೆ. ಅಪಾರ ಜನ ಸೇರಿದ್ದರಿಂದ ಸಂಚಾರಕ್ಕೂ ಅಡಚಣೆ ಉಂಟಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.