ADVERTISEMENT

ಕಲಬುರ್ಗಿ: ರಸ್ತೆ ಅಪಘಾತದಲ್ಲಿ ವಿ.ವಿ. ಕುಲಸಚಿವ ಲಿಂಗರಾಜ ಶಾಸ್ತ್ರಿ ಸಾವು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2021, 13:36 IST
Last Updated 19 ಸೆಪ್ಟೆಂಬರ್ 2021, 13:36 IST
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು, ಡಾ. ಲಿಂಗರಾಜ ಶಾಸ್ತ್ರಿ (ಒಳ ಚಿತ್ರ)
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು, ಡಾ. ಲಿಂಗರಾಜ ಶಾಸ್ತ್ರಿ (ಒಳ ಚಿತ್ರ)   

ಕಲಬುರ್ಗಿ: ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಕಡೋಳ ಗ್ರಾಮದ ಬಳಿ ಭಾನುವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲಬುರ್ಗಿಯ ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ (50) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಅವರ ಪತ್ನಿಗೆ ಗಾಯಗಳಾಗಿದ್ದು, ಇಬ್ಬರು ಪುತ್ರರು ಅಪಾಯದಿಂದ ಪಾರಾಗಿದ್ದಾರೆ.

ಭಾನುವಾರ ರಜೆ ಇದ್ದುದರಿಂದ ಬಸವ ಕಲ್ಯಾಣ ನೋಡಲು ಕುಟುಂಬ ಸದಸ್ಯರೊಂದಿಗೆ ತೆರಳಿದ್ದರು. ಊಟ ಮುಗಿಸಿಕೊಂಡು ವಾಪಸ್ ಬರುವ ಹೊತ್ತಿನಲ್ಲಿ ಶಾಸ್ತ್ರಿ ಅವರ ಪುತ್ರ ಕಾರು ಚಾಲನೆ ಮಾಡುತ್ತಿದ್ದ. ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆಯಿತು. ಚಾಲಕರ ಸೀಟಿನ ಪಕ್ಕದ ಸೀಟಿನಲ್ಲಿ ಕುಳಿತಿದ್ದುದರಿಂದ ಅದೇ ಭಾಗದಲ್ಲಿ ಡಿಕ್ಕಿ ಹೊಡೆದಿತ್ತು.

ಪ್ರಾಣ ಉಳಿಸದ ಏರ್‌ ಬ್ಯಾಗ್: ಕಾರು ಡಿಕ್ಕಿ ಹೊಡೆಯುತ್ತಿದ್ದಂತೆಯೇ ಏರ್‌ ಬ್ಯಾಗ್‌ಗಳು ತೆರೆದುಕೊಂಡಿವೆ. ಆದರೆ, ಶಾಸ್ತ್ರಿ ಅವರ ಜೀವವುಳಿದಿಲ್ಲ.

ADVERTISEMENT

ಜೇನು ದಾಳಿ: ಅಪಘಾತ ಸಂಭವಿಸಿದ ಸ್ಥಳದಲ್ಲಿ ಜೇನು ಹುಳುಗಳಿದ್ದವು. ಅವು ಶಾಸ್ತ್ರಿ ಅವರ ಪತ್ನಿಗೆ ಕಚ್ಚಿವೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.