ADVERTISEMENT

ಕಲಬುರ್ಗಿ: ತುಂತುರು ಮಳೆಯಲ್ಲಿ‌ ಸ್ವಾತಂತ್ರ್ಯ ಸಂಭ್ರಮ‌

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2020, 5:35 IST
Last Updated 15 ಆಗಸ್ಟ್ 2020, 5:35 IST
ಸಚಿವ ಶ್ರೀಮಂತ ಪಾಟೀಲ
ಸಚಿವ ಶ್ರೀಮಂತ ಪಾಟೀಲ   

ಕಲಬುರ್ಗಿ: ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು.

ಕೈಮಗ್ಗ ಮತ್ತು ಜವಳಿ‌ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ‌ ಸಚಿವ‌ ಶ್ರೀಮಂತ ಬಾಳಾಸಾಹೇಬ ಪಾಟೀಲ‌ ಅವರು ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರುತ್ತಿದ್ದಂತೆ ರಾಷ್ಟ್ರಗೀತೆ ಹಾಗೂ ರೈತಗೀತೆ ಹಾಡಲಾಯಿತು. ಸಚಿವರು ಕವಾಯತು ತಂಡಗಳ ಪರಿವೀಕ್ಷಣೆ ಮಾಡಿ‌ದರು. ವಿವಿಧ ಇಲಾಖೆಗಳಿಂದ ಸ್ಥಬ್ಧಚಿತ್ರಗಳ ಪ್ರದರ್ಶನ ನಡೆಯಿತು.

ADVERTISEMENT

ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ಇರಲಿಲ್ಲ. ಕೋವಿಡ್ ಯೋಧರು ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇಡೀ ಕಾರ್ಯಕ್ರಮ‌ ಜಿಟಿ ಜಿಟಿ ಮಳೆಯಲ್ಲೇ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.