ADVERTISEMENT

ಕಲಬುರ್ಗಿ: ಪೊಲೀಸ್ ಭದ್ರತೆಯಲ್ಲಿ ರಸ್ತೆಗಿಳಿದ ಬಸ್‌ಗಳು

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 4:26 IST
Last Updated 14 ಡಿಸೆಂಬರ್ 2020, 4:26 IST
ಸಂಚಾರ ಆರಂಭಿಸಿದ ಕೆಎಸ್‌ಆರ್‌ಟಿಸಿ ಬಸ್
ಸಂಚಾರ ಆರಂಭಿಸಿದ ಕೆಎಸ್‌ಆರ್‌ಟಿಸಿ ಬಸ್   

ಕಲಬುರ್ಗಿ: ನಗರದಲ್ಲಿ ಸೋಮವಾರ ಬೆಳಿಗ್ಗೆಯಿಂದ ಬಸ್ ಸಂಚಾರ ಆರಂಭವಾಗಿದೆ.

ಪ್ರಯಾಣಿಕರ ದಟ್ಟಣೆ ನೋಡಿಕೊಂಡು ‌ವಿವಿಧ ನಗರಗಳಿಗೆ ‌ಬಸ್ ಗಳನ್ನು ಓಡಿಸಲಾಗುತ್ತಿದೆ. ಪ್ರತಿ ಬಸ್ ಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕೇಂದ್ರ ‌ಬಸ್ ನಿಲ್ದಾಣದಲ್ಲಿ ಎಸಿಪಿ‌ ಗಂಗಾಧರ ‌ಚಿಕ್ಕಮಠ ನೇತೃತ್ವದಲ್ಲಿ ‌ಪೊಲೀಸರು ಭದ್ರತಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಹೈದರಾಬಾದ್, ವಿಜಯಪುರ, ಬೀದರ್, ಶಹಾಪುರ ಕಡೆ ಬಸ್ ಗಳ ಸಂಚಾರ ಆರಂಭವಾಗಿದೆ.

ADVERTISEMENT

ಭಾನುವಾರ ರಾತ್ರಿ ಸರ್ಕಾರದೊಂದಿಗೆ ‌ನಡೆದ ಮಾತುಕತೆಯಲ್ಲಿ ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆಯನ್ನು ‌ಸರ್ಕಾರ ತಳ್ಳಿ ಹಾಕಿತ್ತು. ‌ಆದ್ದರಿಂದ ಮುಷ್ಕರ ಮುಂದುವರಿಸುವುದಾಗಿ ನೌಕರರ ಕೂಟ ತಿಳಿಸಿತ್ತು.

ಆದರೆ ಕಲಬುರ್ಗಿಯಲ್ಲಿ ಒಂದೊಂದಾಗಿ ಬಸ್ ಗಳು ರಸ್ತೆಗಿಳಿದಿದ್ದರಿಂದ ಪ್ರಯಾಣಿಕರು ನಿಟ್ಟುಸಿರು ಬಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.