ADVERTISEMENT

ಯುವ ಸಾಹಿತಿಗಳಿಗೆ ಕಣವಿ ಮಾದರಿ: ವೀರೇಂದ್ರ ಕೊಲ್ಲೂರ್

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2022, 7:19 IST
Last Updated 17 ಫೆಬ್ರುವರಿ 2022, 7:19 IST
ಚಿತ್ತಾಪುರ ಪಟ್ಟಣದ ಪ್ರಾರ್ಥನಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಡಾ.ಚನ್ನವೀರ ಕಣವಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು
ಚಿತ್ತಾಪುರ ಪಟ್ಟಣದ ಪ್ರಾರ್ಥನಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಡಾ.ಚನ್ನವೀರ ಕಣವಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು   

ಚಿತ್ತಾಪುರ: ‘ಕನ್ನಡ ಸಾಹಿತ್ಯ ಲೋಕದಲ್ಲಿ ಉತ್ತಮ ಸಾಹಿತ್ಯ ರಚನೆಯ ಮೂಲಕ ಕನ್ನಡಿಗರ ಮನದಲ್ಲಿ ಮನೆ ಮಾಡಿರುವ ಸಾಹಿತಿ ಡಾ.ಚನ್ನವೀರ ಕಣವಿ ಅವರು ಇಂದಿನ ಹೊಸ ಪೀಳಿಗೆಯ ಯುವ ಸಾಹಿತಿಗಳಿಗೆ ಮಾದರಿಯಾಗಿದ್ದಾರೆ’ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರೇಂದ್ರ ಕೊಲ್ಲೂರ್ ಹೇಳಿದರು.

ಪಟ್ಟಣದ ಪ್ರಾರ್ಥನಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಕಸಾಪದಿಂದ ಆಯೋಜಿಸಿದ್ದ ಡಾ.ಚನ್ನವೀರ ಕಣವಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಸವರಾಜ ಯಂಭತ್ನಾಳ ಮಾತನಾಡಿದರು.

ADVERTISEMENT

ರವೀಂದ್ರ ಸಜ್ಜನಶೆಟ್ಟಿ, ರೇವಣಸಿದ್ದಪ್ಪ ರೋಣದ, ಬಸವರಾಜ ಚಿನ್ನಮಳ್ಳಿ, ಜಗದೇವ ದಿಗ್ಗಾಂವಕರ್, ಚಂದ್ರಶೇಖರ ಉಟಗೂರ, ವೀರಭದ್ರಪ್ಪ ಗುರುಮಠಕಲ್, ಮೋನಯ್ಯ ಪಂಚಾಳ, ಮಲ್ಲಿಕಾರ್ಜುನ ಮುಡಬೂಳಕರ್ ಇದ್ದರು.

ಒಂದು ನಿಮಿಷ ಮೌನಾಚರಣೆ ಮಾಡಿ ಪುಷ್ಪನಮನ ಅರ್ಪಿಸಲಾಯಿತು.

ಶಿಕ್ಷಕ ನರಸಪ್ಪ ಚಿನ್ನಾಕಟ್ಟಿ ನಿರೂಪಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.