ಕಲಬುರ್ಗಿ: ನಗರದಲ್ಲಿ ಫೆ.5,6 ಮತ್ತು 7ರಂದು ನಡೆಯಲಿರುವ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಲಾಗಿದೆ.
ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯ ಅವಧಿಯಲ್ಲಿ 08472 277411 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಸಿಂಪಿ ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಸಮ್ಮೇಳನದ ಪ್ರತಿನಿಧಿಗಳ ನೋಂದಣಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಇದೇ ಮೊದಲ ಬಾರಿಗೆ ಜಿಲ್ಲಾಧಿಕಾರಿ ಸೂಚನೆಯ ಮೇರೆಗೆ ಬಾರ್ಕೋಡ್ ಹೊಂದಿದ ರಶೀದಿ ಪುಸ್ತಕಗಳನ್ನು ನೀಡಲಾಗಿದೆ. ಈ ಹಿಂದೆ ಕಸಾಪ ತಾಲ್ಲೂಕು ಹಾಗೂ ಜಿಲ್ಲಾ ಘಟಕಗಳಿಗೆ ವಿತರಿಸಿದ್ದ ರಶೀದಿ ಪುಸ್ತಕಗಳನ್ನು ವಾಪಾಸ್ ಪಡೆದು, ಬಾರ್ಕೋಡ್ ಸಹಿತತಲಾ 100 ರಶೀದಿಗಳು ಇರುವ183 ಪುಸ್ತಕಗಳನ್ನು ವಿತರಿಸಲಾಗಿದೆ’ ಎಂದರು.
ಸಮಯ ಕಡಿಮೆ ಇರುವುದರಿಂದ ಜ.15 ರೊಳಗೆ ನೋಂದಣಿಯ ಮಾಹಿತಿ ನೀಡುವಂತೆ ಘಟಕಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.