ADVERTISEMENT

ಸೇತುವೆ ‌ಮೇಲೆ ಸಂಚಾರಕ್ಕೆ ತಡೆ: ಕಲಬುರ್ಗಿ-ವಿಜಯಪುರ ಸಂಪರ್ಕ ‌ಕಡಿತ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 8:07 IST
Last Updated 15 ಅಕ್ಟೋಬರ್ 2020, 8:07 IST
ಕಲಬುರ್ಗಿ-ವಿಜಯಪುರ ರಸ್ತೆಯ ಕಟ್ಟಿಸಂಗಾವಿ ಸೇತುವೆಯ ಮೇಲೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಕಲಬುರ್ಗಿ-ವಿಜಯಪುರ ರಸ್ತೆಯ ಕಟ್ಟಿಸಂಗಾವಿ ಸೇತುವೆಯ ಮೇಲೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.   

ಕಲಬುರ್ಗಿ: ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜಿನಿಂದ ಗುರುವಾರ ಬೆಳಿಗ್ಗೆ 2.23 ಲಕ್ಷ ‌ಕ್ಯುಸೆಕ್ ನೀರು ಬಿಟ್ಟಿದ್ದರಿಂದ ಜೇವರ್ಗಿ ತಾಲ್ಲೂಕಿನ ಕಟ್ಟಿಸಂಗಾವಿ ಬಳಿಯ ಸೇತುವೆ ಮೇಲೆ ನೀರು ಹರಿಯುವ ಸಂಭವವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸೇತುವೆ ಮೇಲಿನ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

ಇದರಿಂದಾಗಿ ಕಲಬುರ್ಗಿ-ವಿಜಯಪುರ ಮಧ್ಯದ ಸಂಪರ್ಕ ಕಡಿತಗೊಂಡಿದೆ.ಸೇತುವೆ ಬಂದ್ ಮಾಡುವ ಮುನ್ಸೂಚನೆ ಇರದೇ ಸೇತುವೆ ಬಳಿ ಬಂದ ಸಾರಿಗೆ ಸಂಸ್ಥೆ ಬಸ್ ಗಳು ಹಾಗೂ ಖಾಸಗಿ ವಾಹನಗಳು ಎರಡೂ ಬದಿ ಕಿಲೋಮೀಟರ್ ಗಟ್ಟಲೇ ನಿಂತಿವೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸೇತುವೆ ಬಳಿ ಬರದಂತೆ ಧ್ವನಿವರ್ಧಕದ ಮೂಲಕ ಕೂಗಿ ಹೇಳುತ್ತಿದ್ದಾರೆ. ಜೇವರ್ಗಿ ಶಾಸಕ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ. ಅಜಯ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.