ಕಲಬುರ್ಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಮೈನಾಳ ಗ್ರಾಮದ ಹೊರವಲಯದಲ್ಲಿ ಭೂಮಿ ಬಿರುಕು ಬಿಟ್ಟಿದ್ದು, ಜನರು ಭಯಭೀತರಾಗಿದ್ದಾರೆ.
ಸುಮಾರು 60ರಿಂದ 70 ಗಜದಷ್ಟು ಭೂಮಿ ಬಿರುಕು ಬಿಟ್ಟಿದ್ದು, ಇನ್ನೂ ಬಿರುಕಿನ ಪ್ರಮಾಣ ಜಾಸ್ತಿಯಾಗುತ್ತಲೇ ಇದೆ.
ಈ ಬಗ್ಗೆ ಪರಿಶೀಲಿಸಲು ಭೂವಿಜ್ಞಾನಿಗಳನ್ನು ಗ್ರಾಮಕ್ಕೆ ಕಳಿಸಬೇಕು ಎಂದು ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರಿಗೆ ಪತ್ರ ಬರೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.