ಕಲಬುರ್ಗಿ:ಗುಲಬರ್ಗಾ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಪರ ಚುನಾವಣೆ ಪ್ರಚಾರಕ್ಕೆಂದು ಹೆಲಿಕಾಪ್ಟರ್ನಲ್ಲಿ ಬಂದಿಳಿದ ಸಿಎಲ್ಪಿ ನಾಯಕ ಸಿದ್ದರಾಮಯ್ಯ ಅವರು ಕೈಯಲ್ಲಿ ನಿಂಬೆ ಹಣ್ಣು ಹಿಡಿದುಕೊಂಡು ಅಚ್ಚರಿ ಮೂಡಿಸಿದರು.
ಇದನ್ನು ಗಮನಿಸಿದ ಪತ್ರಕರ್ತರು, ಏನ್ ಸರ್ ಕೈಯಲ್ಲಿ ನಿಂಬೆ ಹಣ್ಣು ಎಂದು ಪ್ರಶ್ನಿಸುತ್ತಿದ್ದಂತೆಯೇ, ಪಕ್ಕದಲ್ಲೇ ಇದ್ದ ಪತ್ರಕರ್ತರೊಬ್ಬರ ಜೇಬಿಗೆ ಹಾಕಿದರು.
'ಯಾರೋ ಕೊಟ್ಟಿದ್ದರು. ಅದಕ್ಕೆ ಹಿಡಿದುಕೊಂಡಿದ್ದೆ, ನನಗೆ ಅದರಲ್ಲಿ ನಂಬಿಕೆ ಇಲ್ಲ' ಎಂದು ನಗುತ್ತಲೇ ಸಮಜಾಯಿಷಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.