ADVERTISEMENT

ಭಗವಾನ ಮಹಾವೀರ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2019, 14:31 IST
Last Updated 17 ಏಪ್ರಿಲ್ 2019, 14:31 IST
ಕಲಬುರ್ಗಿಯಲ್ಲಿ ಮಹಾವೀರ ಜಯಂತಿ ಆಚರಿಸಲಾಯಿತು
ಕಲಬುರ್ಗಿಯಲ್ಲಿ ಮಹಾವೀರ ಜಯಂತಿ ಆಚರಿಸಲಾಯಿತು   

ಕಲಬುರ್ಗಿ: ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಭಗವಾನ ಮಹಾವೀರ ಜಯಂತಿಯನ್ನು ಬುಧವಾರ ಇಲ್ಲಿ ಸರಳವಾಗಿ ಆಚರಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಹಾಗೂ ಗಣ್ಯರು ಭಗವಾನ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.

ಮಹಾವೀರ ಜೈನ ಮಂದಿರ ಅಧ್ಯಕ್ಷ ಚಂದ್ರಮೋಹನ ಶಹಾ, ಆದಿನಾಥ ಜೈನ ಮಂದಿರದ ಅಧ್ಯಕ್ಷ ನಾಗನಾಥ ಚಿಂಧೆ, ಉಪಾಧ್ಯಕ್ಷ ಸುಶೀಲಕುಮಾರ ಕೊಠಾರಿ, ಕಲಾವಿದ ಬಾಬುರಾವ ಕೋಬಾಳ, ಸುಬೋಧ್‌ ಶಹಾ, ಕಾರ್ಯದರ್ಶಿ ಡಾ.ಶ್ರೇಯಮ್ಸ್ ಕೊಠಾರಿ, ಡಾ.ಪಿ.ವಿ. ಕೋಠಾರಿ ಹಾಗೂ ಸಮಾಜದ ಗಣ್ಯರು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.