ಕಲಬುರ್ಗಿ: ಕೋವಿಡ್ ಪ್ರಯುಕ್ತ ಭಾನುವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಭಗವಾನ್ ಮಹಾವೀರರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ ಅವರು ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮತ್ತು ಪೂಜೆ ಮಾಡುವುದರ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಶ್ರೀ 1008 ಆದಿನಾಥ ದಿಗಂಬರ ಜೈನ ಮಂದಿರದ ಅಧ್ಯಕ್ಷ ನಾಗನಾಥ್ ಚಿಂದೆ, ಶ್ರೀ 1008 ಮಹಾವೀರ ಜೈನ ಮಂದಿರದ ಅಧ್ಯಕ್ಷ ಚಂದ್ರಮೋಹನ್ ಶಹಾ, ಸಂಕೇಶ್ವರ ಪಾರ್ಶ್ವನಾಥ ಜೈನ ಶ್ವೇತಾಂಬರ ಸಂಘದ ಅಧ್ಯಕ್ಷ ಲಾಲಚಂದ ಜೈನ್, ಜೈನ ಸೋಷಿಯಲ್ ಗ್ರೂಪ್ನ ಸಿ.ಎ. ಸುನೀಲ್ ಲೋಡಾ ಸೇರಿದಂತೆ ಜೈನ ಸಮುದಾಯದ ಮುಖಂಡರಾದ ಪ್ರೀತಮ್ ಮೆಹತಾ, ಅಭಿಜಿತ್ ಶಹಾ, ಹಾಗೂ ಸಿ.ಎ.ಮನಿಲಾಲ್ ಶಹಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.